11:12 PM Saturday22 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಮೊಡಂಕಾಪು: ಕೊಂಕಣಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರ

29/11/2024, 22:48

ಬಂಟ್ವಾಳ(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಸಹಯೋಗದಿಂದ ಮೊಡಂಕಾಪು ಕನ್ನಡ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಬಂಟ್ವಾಳ ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ವಂ|ಫಾ| ವಲೇರಿಯನ್‌ ಡಿಸೋಜ, ಕಾರ್ಯಾಗಾರದ ಅಧ್ಯಕ್ಷರಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಮುಖ್ಯ ಅತಿಥಿಗಳಾಗಿ ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಅಧ್ಯಕ್ಷರಾದ ಜೋನ್‌ ಲಸ್ರಾದೊ, ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣ ಅಭಿವೃದ್ದಿ ಬ್ಯಾಂಕ್‌ ಅಧ್ಯಕ್ಷರಾದ ಅರುಣ್‌ ರೋಶನ್‌ ಡಿಸೋಜ, ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಕೇಂದ್ರಿಯ ನಿಕಟಪೂರ್ವ ಅಧ್ಯಕ್ಷರಾದ ಸ್ಟ್ಯಾನಿ ಲೋಬೊರ ಅವರು ಉಪಸ್ಥಿತರಿದ್ದರು,
ತರಬೇತುದಾರರಾಗಿ ಕವಯತ್ರಿಯಾದ ಡಿಂಪಲ್‌ ಜೆನಿಫರ್ ಫೆರ್ನಾಂಡಿಸ್‌ ಅವರು ಕವಿತೆ ರಚನೆ ಬಗ್ಗೆ ಹಾಗೂ ತಮ್ಮ ಅನುಭವದ ಬಗ್ಗೆ ಮಾಹಿತಿ ಹಂಚಿಕೊಂಡರು. ಕವನಗಳು ಹೇಗೆ ಉದ್ಬವಗೊಳ್ಳುತ್ತವೆ, ಯಾವ ರೀತಿ ಕವನ ಬರೆಯಬಹುದೆಂದು ಮಾಹಿತಿ ನೀಡಿದರು. ಯುವಕವಿ, ಕಥೆಗಾರರಾದ ಗ್ಲ್ಯಾನಿಷ್‌ ಮಾರ್ಟಿಸ್‌ ಯುವ ಲೇಖಕರಿಗೆ ಕಥೆ ಬರೆಯುವ ವಿಧಾನ/ ಹಂತಗಳ ಬಗ್ಗೆ ಮಾಹಿತಿ ನೀಡಿ, ಕಥೆ ಹೇಗೆ ಬರೆಯಬೇಕೆಂದು ತಿಳಿಸಿದರು.
ಸಮರ್ಥ್‌ ಭಟ್‌ರವರ ಸದಸ್ಯ ಸಂಚಾಲಕತ್ವದಲ್ಲಿ ಈ ನಡೆಯಿತು, ಅಕಾಡೆಮಿ ಸದಸ್ಯರುಗಳಾದ ನವೀನ್‌ ಲೋಬೊ, ಅಕ್ಷತಾ ಎಂ. ನಾಯಕ್‌ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು