6:17 AM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಮೊಡಂಕಾಪು: ಕೊಂಕಣಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರ

29/11/2024, 22:48

ಬಂಟ್ವಾಳ(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಸಹಯೋಗದಿಂದ ಮೊಡಂಕಾಪು ಕನ್ನಡ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಬಂಟ್ವಾಳ ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ವಂ|ಫಾ| ವಲೇರಿಯನ್‌ ಡಿಸೋಜ, ಕಾರ್ಯಾಗಾರದ ಅಧ್ಯಕ್ಷರಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಮುಖ್ಯ ಅತಿಥಿಗಳಾಗಿ ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಅಧ್ಯಕ್ಷರಾದ ಜೋನ್‌ ಲಸ್ರಾದೊ, ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣ ಅಭಿವೃದ್ದಿ ಬ್ಯಾಂಕ್‌ ಅಧ್ಯಕ್ಷರಾದ ಅರುಣ್‌ ರೋಶನ್‌ ಡಿಸೋಜ, ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಕೇಂದ್ರಿಯ ನಿಕಟಪೂರ್ವ ಅಧ್ಯಕ್ಷರಾದ ಸ್ಟ್ಯಾನಿ ಲೋಬೊರ ಅವರು ಉಪಸ್ಥಿತರಿದ್ದರು,
ತರಬೇತುದಾರರಾಗಿ ಕವಯತ್ರಿಯಾದ ಡಿಂಪಲ್‌ ಜೆನಿಫರ್ ಫೆರ್ನಾಂಡಿಸ್‌ ಅವರು ಕವಿತೆ ರಚನೆ ಬಗ್ಗೆ ಹಾಗೂ ತಮ್ಮ ಅನುಭವದ ಬಗ್ಗೆ ಮಾಹಿತಿ ಹಂಚಿಕೊಂಡರು. ಕವನಗಳು ಹೇಗೆ ಉದ್ಬವಗೊಳ್ಳುತ್ತವೆ, ಯಾವ ರೀತಿ ಕವನ ಬರೆಯಬಹುದೆಂದು ಮಾಹಿತಿ ನೀಡಿದರು. ಯುವಕವಿ, ಕಥೆಗಾರರಾದ ಗ್ಲ್ಯಾನಿಷ್‌ ಮಾರ್ಟಿಸ್‌ ಯುವ ಲೇಖಕರಿಗೆ ಕಥೆ ಬರೆಯುವ ವಿಧಾನ/ ಹಂತಗಳ ಬಗ್ಗೆ ಮಾಹಿತಿ ನೀಡಿ, ಕಥೆ ಹೇಗೆ ಬರೆಯಬೇಕೆಂದು ತಿಳಿಸಿದರು.
ಸಮರ್ಥ್‌ ಭಟ್‌ರವರ ಸದಸ್ಯ ಸಂಚಾಲಕತ್ವದಲ್ಲಿ ಈ ನಡೆಯಿತು, ಅಕಾಡೆಮಿ ಸದಸ್ಯರುಗಳಾದ ನವೀನ್‌ ಲೋಬೊ, ಅಕ್ಷತಾ ಎಂ. ನಾಯಕ್‌ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು