8:48 PM Sunday7 - December 2025
ಬ್ರೇಕಿಂಗ್ ನ್ಯೂಸ್
ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ… Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ

ಇತ್ತೀಚಿನ ಸುದ್ದಿ

ಮೊಡಂಕಾಪು: ಕೊಂಕಣಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರ

29/11/2024, 22:48

ಬಂಟ್ವಾಳ(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಸಹಯೋಗದಿಂದ ಮೊಡಂಕಾಪು ಕನ್ನಡ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಬಂಟ್ವಾಳ ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ವಂ|ಫಾ| ವಲೇರಿಯನ್‌ ಡಿಸೋಜ, ಕಾರ್ಯಾಗಾರದ ಅಧ್ಯಕ್ಷರಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಮುಖ್ಯ ಅತಿಥಿಗಳಾಗಿ ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಅಧ್ಯಕ್ಷರಾದ ಜೋನ್‌ ಲಸ್ರಾದೊ, ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣ ಅಭಿವೃದ್ದಿ ಬ್ಯಾಂಕ್‌ ಅಧ್ಯಕ್ಷರಾದ ಅರುಣ್‌ ರೋಶನ್‌ ಡಿಸೋಜ, ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಕೇಂದ್ರಿಯ ನಿಕಟಪೂರ್ವ ಅಧ್ಯಕ್ಷರಾದ ಸ್ಟ್ಯಾನಿ ಲೋಬೊರ ಅವರು ಉಪಸ್ಥಿತರಿದ್ದರು,
ತರಬೇತುದಾರರಾಗಿ ಕವಯತ್ರಿಯಾದ ಡಿಂಪಲ್‌ ಜೆನಿಫರ್ ಫೆರ್ನಾಂಡಿಸ್‌ ಅವರು ಕವಿತೆ ರಚನೆ ಬಗ್ಗೆ ಹಾಗೂ ತಮ್ಮ ಅನುಭವದ ಬಗ್ಗೆ ಮಾಹಿತಿ ಹಂಚಿಕೊಂಡರು. ಕವನಗಳು ಹೇಗೆ ಉದ್ಬವಗೊಳ್ಳುತ್ತವೆ, ಯಾವ ರೀತಿ ಕವನ ಬರೆಯಬಹುದೆಂದು ಮಾಹಿತಿ ನೀಡಿದರು. ಯುವಕವಿ, ಕಥೆಗಾರರಾದ ಗ್ಲ್ಯಾನಿಷ್‌ ಮಾರ್ಟಿಸ್‌ ಯುವ ಲೇಖಕರಿಗೆ ಕಥೆ ಬರೆಯುವ ವಿಧಾನ/ ಹಂತಗಳ ಬಗ್ಗೆ ಮಾಹಿತಿ ನೀಡಿ, ಕಥೆ ಹೇಗೆ ಬರೆಯಬೇಕೆಂದು ತಿಳಿಸಿದರು.
ಸಮರ್ಥ್‌ ಭಟ್‌ರವರ ಸದಸ್ಯ ಸಂಚಾಲಕತ್ವದಲ್ಲಿ ಈ ನಡೆಯಿತು, ಅಕಾಡೆಮಿ ಸದಸ್ಯರುಗಳಾದ ನವೀನ್‌ ಲೋಬೊ, ಅಕ್ಷತಾ ಎಂ. ನಾಯಕ್‌ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು