7:33 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮೊಡಂಕಾಪು: ಕೊಂಕಣಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರ

29/11/2024, 22:48

ಬಂಟ್ವಾಳ(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಸಹಯೋಗದಿಂದ ಮೊಡಂಕಾಪು ಕನ್ನಡ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಬಂಟ್ವಾಳ ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ವಂ|ಫಾ| ವಲೇರಿಯನ್‌ ಡಿಸೋಜ, ಕಾರ್ಯಾಗಾರದ ಅಧ್ಯಕ್ಷರಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಮುಖ್ಯ ಅತಿಥಿಗಳಾಗಿ ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಅಧ್ಯಕ್ಷರಾದ ಜೋನ್‌ ಲಸ್ರಾದೊ, ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣ ಅಭಿವೃದ್ದಿ ಬ್ಯಾಂಕ್‌ ಅಧ್ಯಕ್ಷರಾದ ಅರುಣ್‌ ರೋಶನ್‌ ಡಿಸೋಜ, ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಕೇಂದ್ರಿಯ ನಿಕಟಪೂರ್ವ ಅಧ್ಯಕ್ಷರಾದ ಸ್ಟ್ಯಾನಿ ಲೋಬೊರ ಅವರು ಉಪಸ್ಥಿತರಿದ್ದರು,
ತರಬೇತುದಾರರಾಗಿ ಕವಯತ್ರಿಯಾದ ಡಿಂಪಲ್‌ ಜೆನಿಫರ್ ಫೆರ್ನಾಂಡಿಸ್‌ ಅವರು ಕವಿತೆ ರಚನೆ ಬಗ್ಗೆ ಹಾಗೂ ತಮ್ಮ ಅನುಭವದ ಬಗ್ಗೆ ಮಾಹಿತಿ ಹಂಚಿಕೊಂಡರು. ಕವನಗಳು ಹೇಗೆ ಉದ್ಬವಗೊಳ್ಳುತ್ತವೆ, ಯಾವ ರೀತಿ ಕವನ ಬರೆಯಬಹುದೆಂದು ಮಾಹಿತಿ ನೀಡಿದರು. ಯುವಕವಿ, ಕಥೆಗಾರರಾದ ಗ್ಲ್ಯಾನಿಷ್‌ ಮಾರ್ಟಿಸ್‌ ಯುವ ಲೇಖಕರಿಗೆ ಕಥೆ ಬರೆಯುವ ವಿಧಾನ/ ಹಂತಗಳ ಬಗ್ಗೆ ಮಾಹಿತಿ ನೀಡಿ, ಕಥೆ ಹೇಗೆ ಬರೆಯಬೇಕೆಂದು ತಿಳಿಸಿದರು.
ಸಮರ್ಥ್‌ ಭಟ್‌ರವರ ಸದಸ್ಯ ಸಂಚಾಲಕತ್ವದಲ್ಲಿ ಈ ನಡೆಯಿತು, ಅಕಾಡೆಮಿ ಸದಸ್ಯರುಗಳಾದ ನವೀನ್‌ ಲೋಬೊ, ಅಕ್ಷತಾ ಎಂ. ನಾಯಕ್‌ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು