1:25 PM Thursday20 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಮೊಡಂಕಾಪು: ಕೊಂಕಣಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರ

29/11/2024, 22:48

ಬಂಟ್ವಾಳ(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಸಹಯೋಗದಿಂದ ಮೊಡಂಕಾಪು ಕನ್ನಡ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಬಂಟ್ವಾಳ ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ವಂ|ಫಾ| ವಲೇರಿಯನ್‌ ಡಿಸೋಜ, ಕಾರ್ಯಾಗಾರದ ಅಧ್ಯಕ್ಷರಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಮುಖ್ಯ ಅತಿಥಿಗಳಾಗಿ ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಅಧ್ಯಕ್ಷರಾದ ಜೋನ್‌ ಲಸ್ರಾದೊ, ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣ ಅಭಿವೃದ್ದಿ ಬ್ಯಾಂಕ್‌ ಅಧ್ಯಕ್ಷರಾದ ಅರುಣ್‌ ರೋಶನ್‌ ಡಿಸೋಜ, ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಕೇಂದ್ರಿಯ ನಿಕಟಪೂರ್ವ ಅಧ್ಯಕ್ಷರಾದ ಸ್ಟ್ಯಾನಿ ಲೋಬೊರ ಅವರು ಉಪಸ್ಥಿತರಿದ್ದರು,
ತರಬೇತುದಾರರಾಗಿ ಕವಯತ್ರಿಯಾದ ಡಿಂಪಲ್‌ ಜೆನಿಫರ್ ಫೆರ್ನಾಂಡಿಸ್‌ ಅವರು ಕವಿತೆ ರಚನೆ ಬಗ್ಗೆ ಹಾಗೂ ತಮ್ಮ ಅನುಭವದ ಬಗ್ಗೆ ಮಾಹಿತಿ ಹಂಚಿಕೊಂಡರು. ಕವನಗಳು ಹೇಗೆ ಉದ್ಬವಗೊಳ್ಳುತ್ತವೆ, ಯಾವ ರೀತಿ ಕವನ ಬರೆಯಬಹುದೆಂದು ಮಾಹಿತಿ ನೀಡಿದರು. ಯುವಕವಿ, ಕಥೆಗಾರರಾದ ಗ್ಲ್ಯಾನಿಷ್‌ ಮಾರ್ಟಿಸ್‌ ಯುವ ಲೇಖಕರಿಗೆ ಕಥೆ ಬರೆಯುವ ವಿಧಾನ/ ಹಂತಗಳ ಬಗ್ಗೆ ಮಾಹಿತಿ ನೀಡಿ, ಕಥೆ ಹೇಗೆ ಬರೆಯಬೇಕೆಂದು ತಿಳಿಸಿದರು.
ಸಮರ್ಥ್‌ ಭಟ್‌ರವರ ಸದಸ್ಯ ಸಂಚಾಲಕತ್ವದಲ್ಲಿ ಈ ನಡೆಯಿತು, ಅಕಾಡೆಮಿ ಸದಸ್ಯರುಗಳಾದ ನವೀನ್‌ ಲೋಬೊ, ಅಕ್ಷತಾ ಎಂ. ನಾಯಕ್‌ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು