3:10 AM Wednesday7 - January 2026
ಬ್ರೇಕಿಂಗ್ ನ್ಯೂಸ್
ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ…

ಇತ್ತೀಚಿನ ಸುದ್ದಿ

ಮೊಡಂಕಾಪು: ಕೊಂಕಣಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರ

29/11/2024, 22:48

ಬಂಟ್ವಾಳ(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಸಹಯೋಗದಿಂದ ಮೊಡಂಕಾಪು ಕನ್ನಡ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಬಂಟ್ವಾಳ ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ವಂ|ಫಾ| ವಲೇರಿಯನ್‌ ಡಿಸೋಜ, ಕಾರ್ಯಾಗಾರದ ಅಧ್ಯಕ್ಷರಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಮುಖ್ಯ ಅತಿಥಿಗಳಾಗಿ ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಅಧ್ಯಕ್ಷರಾದ ಜೋನ್‌ ಲಸ್ರಾದೊ, ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣ ಅಭಿವೃದ್ದಿ ಬ್ಯಾಂಕ್‌ ಅಧ್ಯಕ್ಷರಾದ ಅರುಣ್‌ ರೋಶನ್‌ ಡಿಸೋಜ, ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಕೇಂದ್ರಿಯ ನಿಕಟಪೂರ್ವ ಅಧ್ಯಕ್ಷರಾದ ಸ್ಟ್ಯಾನಿ ಲೋಬೊರ ಅವರು ಉಪಸ್ಥಿತರಿದ್ದರು,
ತರಬೇತುದಾರರಾಗಿ ಕವಯತ್ರಿಯಾದ ಡಿಂಪಲ್‌ ಜೆನಿಫರ್ ಫೆರ್ನಾಂಡಿಸ್‌ ಅವರು ಕವಿತೆ ರಚನೆ ಬಗ್ಗೆ ಹಾಗೂ ತಮ್ಮ ಅನುಭವದ ಬಗ್ಗೆ ಮಾಹಿತಿ ಹಂಚಿಕೊಂಡರು. ಕವನಗಳು ಹೇಗೆ ಉದ್ಬವಗೊಳ್ಳುತ್ತವೆ, ಯಾವ ರೀತಿ ಕವನ ಬರೆಯಬಹುದೆಂದು ಮಾಹಿತಿ ನೀಡಿದರು. ಯುವಕವಿ, ಕಥೆಗಾರರಾದ ಗ್ಲ್ಯಾನಿಷ್‌ ಮಾರ್ಟಿಸ್‌ ಯುವ ಲೇಖಕರಿಗೆ ಕಥೆ ಬರೆಯುವ ವಿಧಾನ/ ಹಂತಗಳ ಬಗ್ಗೆ ಮಾಹಿತಿ ನೀಡಿ, ಕಥೆ ಹೇಗೆ ಬರೆಯಬೇಕೆಂದು ತಿಳಿಸಿದರು.
ಸಮರ್ಥ್‌ ಭಟ್‌ರವರ ಸದಸ್ಯ ಸಂಚಾಲಕತ್ವದಲ್ಲಿ ಈ ನಡೆಯಿತು, ಅಕಾಡೆಮಿ ಸದಸ್ಯರುಗಳಾದ ನವೀನ್‌ ಲೋಬೊ, ಅಕ್ಷತಾ ಎಂ. ನಾಯಕ್‌ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು