11:45 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮೊಡಂಕಾಪು: ಕೊಂಕಣಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರ

29/11/2024, 22:48

ಬಂಟ್ವಾಳ(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಸಹಯೋಗದಿಂದ ಮೊಡಂಕಾಪು ಕನ್ನಡ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಬಂಟ್ವಾಳ ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ವಂ|ಫಾ| ವಲೇರಿಯನ್‌ ಡಿಸೋಜ, ಕಾರ್ಯಾಗಾರದ ಅಧ್ಯಕ್ಷರಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಮುಖ್ಯ ಅತಿಥಿಗಳಾಗಿ ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಅಧ್ಯಕ್ಷರಾದ ಜೋನ್‌ ಲಸ್ರಾದೊ, ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣ ಅಭಿವೃದ್ದಿ ಬ್ಯಾಂಕ್‌ ಅಧ್ಯಕ್ಷರಾದ ಅರುಣ್‌ ರೋಶನ್‌ ಡಿಸೋಜ, ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಕೇಂದ್ರಿಯ ನಿಕಟಪೂರ್ವ ಅಧ್ಯಕ್ಷರಾದ ಸ್ಟ್ಯಾನಿ ಲೋಬೊರ ಅವರು ಉಪಸ್ಥಿತರಿದ್ದರು,
ತರಬೇತುದಾರರಾಗಿ ಕವಯತ್ರಿಯಾದ ಡಿಂಪಲ್‌ ಜೆನಿಫರ್ ಫೆರ್ನಾಂಡಿಸ್‌ ಅವರು ಕವಿತೆ ರಚನೆ ಬಗ್ಗೆ ಹಾಗೂ ತಮ್ಮ ಅನುಭವದ ಬಗ್ಗೆ ಮಾಹಿತಿ ಹಂಚಿಕೊಂಡರು. ಕವನಗಳು ಹೇಗೆ ಉದ್ಬವಗೊಳ್ಳುತ್ತವೆ, ಯಾವ ರೀತಿ ಕವನ ಬರೆಯಬಹುದೆಂದು ಮಾಹಿತಿ ನೀಡಿದರು. ಯುವಕವಿ, ಕಥೆಗಾರರಾದ ಗ್ಲ್ಯಾನಿಷ್‌ ಮಾರ್ಟಿಸ್‌ ಯುವ ಲೇಖಕರಿಗೆ ಕಥೆ ಬರೆಯುವ ವಿಧಾನ/ ಹಂತಗಳ ಬಗ್ಗೆ ಮಾಹಿತಿ ನೀಡಿ, ಕಥೆ ಹೇಗೆ ಬರೆಯಬೇಕೆಂದು ತಿಳಿಸಿದರು.
ಸಮರ್ಥ್‌ ಭಟ್‌ರವರ ಸದಸ್ಯ ಸಂಚಾಲಕತ್ವದಲ್ಲಿ ಈ ನಡೆಯಿತು, ಅಕಾಡೆಮಿ ಸದಸ್ಯರುಗಳಾದ ನವೀನ್‌ ಲೋಬೊ, ಅಕ್ಷತಾ ಎಂ. ನಾಯಕ್‌ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು