3:29 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಮೊಡಂಕಾಪು: ಕೊಂಕಣಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರ

29/11/2024, 22:48

ಬಂಟ್ವಾಳ(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಸಹಯೋಗದಿಂದ ಮೊಡಂಕಾಪು ಕನ್ನಡ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಬಂಟ್ವಾಳ ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ವಂ|ಫಾ| ವಲೇರಿಯನ್‌ ಡಿಸೋಜ, ಕಾರ್ಯಾಗಾರದ ಅಧ್ಯಕ್ಷರಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಮುಖ್ಯ ಅತಿಥಿಗಳಾಗಿ ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಅಧ್ಯಕ್ಷರಾದ ಜೋನ್‌ ಲಸ್ರಾದೊ, ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣ ಅಭಿವೃದ್ದಿ ಬ್ಯಾಂಕ್‌ ಅಧ್ಯಕ್ಷರಾದ ಅರುಣ್‌ ರೋಶನ್‌ ಡಿಸೋಜ, ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಕೇಂದ್ರಿಯ ನಿಕಟಪೂರ್ವ ಅಧ್ಯಕ್ಷರಾದ ಸ್ಟ್ಯಾನಿ ಲೋಬೊರ ಅವರು ಉಪಸ್ಥಿತರಿದ್ದರು,
ತರಬೇತುದಾರರಾಗಿ ಕವಯತ್ರಿಯಾದ ಡಿಂಪಲ್‌ ಜೆನಿಫರ್ ಫೆರ್ನಾಂಡಿಸ್‌ ಅವರು ಕವಿತೆ ರಚನೆ ಬಗ್ಗೆ ಹಾಗೂ ತಮ್ಮ ಅನುಭವದ ಬಗ್ಗೆ ಮಾಹಿತಿ ಹಂಚಿಕೊಂಡರು. ಕವನಗಳು ಹೇಗೆ ಉದ್ಬವಗೊಳ್ಳುತ್ತವೆ, ಯಾವ ರೀತಿ ಕವನ ಬರೆಯಬಹುದೆಂದು ಮಾಹಿತಿ ನೀಡಿದರು. ಯುವಕವಿ, ಕಥೆಗಾರರಾದ ಗ್ಲ್ಯಾನಿಷ್‌ ಮಾರ್ಟಿಸ್‌ ಯುವ ಲೇಖಕರಿಗೆ ಕಥೆ ಬರೆಯುವ ವಿಧಾನ/ ಹಂತಗಳ ಬಗ್ಗೆ ಮಾಹಿತಿ ನೀಡಿ, ಕಥೆ ಹೇಗೆ ಬರೆಯಬೇಕೆಂದು ತಿಳಿಸಿದರು.
ಸಮರ್ಥ್‌ ಭಟ್‌ರವರ ಸದಸ್ಯ ಸಂಚಾಲಕತ್ವದಲ್ಲಿ ಈ ನಡೆಯಿತು, ಅಕಾಡೆಮಿ ಸದಸ್ಯರುಗಳಾದ ನವೀನ್‌ ಲೋಬೊ, ಅಕ್ಷತಾ ಎಂ. ನಾಯಕ್‌ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು