10:52 AM Monday19 - May 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ…

ಇತ್ತೀಚಿನ ಸುದ್ದಿ

ಮೊಡಂಕಾಪು: ಕೊಂಕಣಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರ

29/11/2024, 22:48

ಬಂಟ್ವಾಳ(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಸಹಯೋಗದಿಂದ ಮೊಡಂಕಾಪು ಕನ್ನಡ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಬಂಟ್ವಾಳ ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ವಂ|ಫಾ| ವಲೇರಿಯನ್‌ ಡಿಸೋಜ, ಕಾರ್ಯಾಗಾರದ ಅಧ್ಯಕ್ಷರಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಮುಖ್ಯ ಅತಿಥಿಗಳಾಗಿ ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಅಧ್ಯಕ್ಷರಾದ ಜೋನ್‌ ಲಸ್ರಾದೊ, ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣ ಅಭಿವೃದ್ದಿ ಬ್ಯಾಂಕ್‌ ಅಧ್ಯಕ್ಷರಾದ ಅರುಣ್‌ ರೋಶನ್‌ ಡಿಸೋಜ, ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಕೇಂದ್ರಿಯ ನಿಕಟಪೂರ್ವ ಅಧ್ಯಕ್ಷರಾದ ಸ್ಟ್ಯಾನಿ ಲೋಬೊರ ಅವರು ಉಪಸ್ಥಿತರಿದ್ದರು,
ತರಬೇತುದಾರರಾಗಿ ಕವಯತ್ರಿಯಾದ ಡಿಂಪಲ್‌ ಜೆನಿಫರ್ ಫೆರ್ನಾಂಡಿಸ್‌ ಅವರು ಕವಿತೆ ರಚನೆ ಬಗ್ಗೆ ಹಾಗೂ ತಮ್ಮ ಅನುಭವದ ಬಗ್ಗೆ ಮಾಹಿತಿ ಹಂಚಿಕೊಂಡರು. ಕವನಗಳು ಹೇಗೆ ಉದ್ಬವಗೊಳ್ಳುತ್ತವೆ, ಯಾವ ರೀತಿ ಕವನ ಬರೆಯಬಹುದೆಂದು ಮಾಹಿತಿ ನೀಡಿದರು. ಯುವಕವಿ, ಕಥೆಗಾರರಾದ ಗ್ಲ್ಯಾನಿಷ್‌ ಮಾರ್ಟಿಸ್‌ ಯುವ ಲೇಖಕರಿಗೆ ಕಥೆ ಬರೆಯುವ ವಿಧಾನ/ ಹಂತಗಳ ಬಗ್ಗೆ ಮಾಹಿತಿ ನೀಡಿ, ಕಥೆ ಹೇಗೆ ಬರೆಯಬೇಕೆಂದು ತಿಳಿಸಿದರು.
ಸಮರ್ಥ್‌ ಭಟ್‌ರವರ ಸದಸ್ಯ ಸಂಚಾಲಕತ್ವದಲ್ಲಿ ಈ ನಡೆಯಿತು, ಅಕಾಡೆಮಿ ಸದಸ್ಯರುಗಳಾದ ನವೀನ್‌ ಲೋಬೊ, ಅಕ್ಷತಾ ಎಂ. ನಾಯಕ್‌ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು