12:55 AM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಮೊಡಂಕಾಪು: ಕೊಂಕಣಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರ

29/11/2024, 22:48

ಬಂಟ್ವಾಳ(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಸಹಯೋಗದಿಂದ ಮೊಡಂಕಾಪು ಕನ್ನಡ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಬಂಟ್ವಾಳ ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ವಂ|ಫಾ| ವಲೇರಿಯನ್‌ ಡಿಸೋಜ, ಕಾರ್ಯಾಗಾರದ ಅಧ್ಯಕ್ಷರಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಮುಖ್ಯ ಅತಿಥಿಗಳಾಗಿ ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಅಧ್ಯಕ್ಷರಾದ ಜೋನ್‌ ಲಸ್ರಾದೊ, ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣ ಅಭಿವೃದ್ದಿ ಬ್ಯಾಂಕ್‌ ಅಧ್ಯಕ್ಷರಾದ ಅರುಣ್‌ ರೋಶನ್‌ ಡಿಸೋಜ, ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಕೇಂದ್ರಿಯ ನಿಕಟಪೂರ್ವ ಅಧ್ಯಕ್ಷರಾದ ಸ್ಟ್ಯಾನಿ ಲೋಬೊರ ಅವರು ಉಪಸ್ಥಿತರಿದ್ದರು,
ತರಬೇತುದಾರರಾಗಿ ಕವಯತ್ರಿಯಾದ ಡಿಂಪಲ್‌ ಜೆನಿಫರ್ ಫೆರ್ನಾಂಡಿಸ್‌ ಅವರು ಕವಿತೆ ರಚನೆ ಬಗ್ಗೆ ಹಾಗೂ ತಮ್ಮ ಅನುಭವದ ಬಗ್ಗೆ ಮಾಹಿತಿ ಹಂಚಿಕೊಂಡರು. ಕವನಗಳು ಹೇಗೆ ಉದ್ಬವಗೊಳ್ಳುತ್ತವೆ, ಯಾವ ರೀತಿ ಕವನ ಬರೆಯಬಹುದೆಂದು ಮಾಹಿತಿ ನೀಡಿದರು. ಯುವಕವಿ, ಕಥೆಗಾರರಾದ ಗ್ಲ್ಯಾನಿಷ್‌ ಮಾರ್ಟಿಸ್‌ ಯುವ ಲೇಖಕರಿಗೆ ಕಥೆ ಬರೆಯುವ ವಿಧಾನ/ ಹಂತಗಳ ಬಗ್ಗೆ ಮಾಹಿತಿ ನೀಡಿ, ಕಥೆ ಹೇಗೆ ಬರೆಯಬೇಕೆಂದು ತಿಳಿಸಿದರು.
ಸಮರ್ಥ್‌ ಭಟ್‌ರವರ ಸದಸ್ಯ ಸಂಚಾಲಕತ್ವದಲ್ಲಿ ಈ ನಡೆಯಿತು, ಅಕಾಡೆಮಿ ಸದಸ್ಯರುಗಳಾದ ನವೀನ್‌ ಲೋಬೊ, ಅಕ್ಷತಾ ಎಂ. ನಾಯಕ್‌ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು