8:46 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮೋದಿ, ಅಮಿತ್ ಶಾ ವಿರುದ್ಧ ಟೀಕೆ ಮಾಡಿದ್ದಕ್ಕೆ ಇಡಿಯಿಂದ ಪ್ರಕರಣ ಹಾಕಿಸಿದ್ರು: ಮುಖ್ಯಮಂತ್ರಿ ಸಿದ್ದರಾಮಯ್ಯ

07/11/2024, 18:22

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಟೀಕೆ ಮಾಡಿದ್ದಕ್ಕೆ ಇಡಿಯಿಂದ ಪ್ರಕರಣ ಹಾಕಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮುಗಿಸಿದರೆ‌ ಕಾಂಗ್ರೆಸ್ ಮುಗಿಸದಂಗೆ ಅಂತ ನನ್ನ ಮೇಲೆ ಪ್ರಕರಣ ಹಾಕಿಸಿದ್ದಾರೆ. ನಿಮ್ಮ ಆಶೀರ್ವಾದ ಇರೋವರೆಗೂ ‌ನನಗೆ ಏನೂ ಆಗಲ್ಲ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ‌ಹೇಳಿದರು.
ಗುರುವಾರ ಸಂಡೂರಿನ‌ ಚೋರನೂರು ಗ್ರಾಮದಲ್ಲಿ ಹಮ್ಮಿಕೊಂಡ ‌ಪ್ರಚಾರದಲ್ಲಿ‌ ಮಾತನಾಡಿದ ಅವರು, ‌ಸಂಡೂರು ಉಪ ಚುನಾವಣೆ ‌ಮಹತ್ವಪೂರ್ಣವಾದ ಚುನಾವಣೆ‌. ತುಕಾರಂ ‌ಗೆದ್ದರೆ ಲಾಡ್ ಗೆದ್ದ ಹಾಗೆ‌, ನಾನು ಗೆದ್ದ‌ ಹಾಗೆ. ದೇಶದಲ್ಲಿ ಆಹಾರದ ‌ಕೊರತೆ‌ ಇತ್ತು, ಆಹಾರ ಇಲ್ಲದೇ ಸಾಯ್ತಾ ಇದ್ರು, ಕಾಂಗ್ರೆಸ್ ‌ಆಹಾರ ಸ್ವಾವಲಂಬನೆ‌‌ ಸಾಧಿಸಿತು. ಆವಾಗಿಂದ‌ ಆಹಾರ ‌ಭದ್ರತೆ ಜಾರಿಗೆ ಬಂತು. ಬಿಜೆಪಿಯವರು ದೇಶಕ್ಕಾಗಿ, ಜನರಿಗಾಗಿ ಏನು ಮಾಡಿದ್ರು? ದೇವರಾಜು ಅರಸು ನಂತರ 5 ವರ್ಷ ಅಧಿಕಾರ ಮಾಡಿದ್ದು ‌ಸಿದ್ದರಾಮಯ್ಯ ಮಾತ್ರ. ನಾವು ನೀಡಿದ್ದ ಎಲ್ಲ ಭರವಸೆ‌ ಈಡೇರಿಸಿದ್ದೇವೆ. 136 ಸ್ಥಾನ ಕಾಂಗ್ರೆಸ್ ಗೆ ಜನರು ಕೊಟ್ಟು, ಪೂರ್ಣ ಬಹುಮತ ಸರಕಾರ ‌ಕೊಟ್ರು, ನಾವು ಅಧಿಕಾರಕ್ಕೆ ‌ಬಂದ‌ ಕೂಡಲೇ ಐದು ಗ್ಯಾರಂಟಿ ಯೋಜನೆ ಜಾರಿ‌ ಮಾಡಿದ್ದೀವಿ. ಕುಮಾರಸ್ವಾಮಿ ಭಾಷಣ ಮಾಡಿದ್ರು‌ ಐದು ವರ್ಷ ಜನರ ಜತೆ‌‌ ಕೆಲಸ ಮಾಡಿದವರು ಗೆಲ್ಲಲ್ಲ, ದುಡ್ಡು‌ ಕೊಟ್ಟು ವೋಟು‌ ತಂಗೊಂಡು ಗೆಲ್ತಿವಿ‌ ಅಂತಾ‌ ಹೇಳಿದ್ದ ಭಾಷಣ‌ ತುಣುಕು‌‌ ಇದೆ, ಚನ್ನಪಟ್ಟಣ‌ ಚುನಾವಣೆ ‌ಪ್ರಚಾರದಲ್ಲಿ ನಾವು ಅದನ್ನ ಪ್ಲೇ ಮಾಡ್ತಾ ಇದ್ದೀವಿ. ಸಾಲ ಮನ್ನಾ ಯಾರಾದರೂ ಮಾಡಿದ್ರಾ?, ಬಿಜೆಪಿ ‌ಅವರು ಸಾಲ ಮನ್ನಾ ಮಾಡಿಲ್ಲ. ನಾವು ರೈತರ ಸಾಲ ಮನ್ನಾ ಮಾಡಿದ್ದೀವಿ, ಬಿಜೆಪಿ ‌ಅವರು ಬಂಡವಾಳಶಾಹಿಗಳ ಸಾಲ ಮನ್ನಾ ಮಾಡಿದರು. 16 ಲಕ್ಷ ‌ಕೋಟಿ ಸಾಲ‌ ಮನ್ನಾ ಮಾಡಿದರು. ನಾವು ಸಹಕಾರ ಸಂಘದಲ್ಲಿ ರೈತರು ಮಾಡಿದ ಸಾಲ‌ ಮನ್ನಾ ಮಾಡಿದ್ದೇವೆ. ವಿಧಾನಸೌಧದಲ್ಲಿ ಯಡಿಯೂರಪ್ಪ ‌ಹೇಳಿದ್ರು, ಸಾಲ ಮನ್ನಾ ಮಾಡಕ್ಕಗಲ್ಲ, ನೋಟ ಪ್ರಿಂಟ್ ಮಾಡೋ ಮಷಿನ್ ಇಲ್ಲ ಅಂದ್ರು ಮಿ.ಯಡಿಯೂರಪ್ಪ, ಅಂತವರು ಮಣ್ಣಿನ ಮಗ, ರೈತರ ಮಗ ಅಂತಾರೆ‌ ಎಂದು ವ್ಯಂಗ್ಯವಾಡಿದರು.
ಮೋದಿ ಅವರು ಅಚ್ಛೇ ದಿನ ಆಯೆಂಗಾ ಅಂದರು, ಕಪ್ಪು ‌ಹಣ ತರ್ತಿವಿ‌ ಪ್ರತಿ ‌ಕುಟುಂಬಕ್ಕೆ 15 ಲಕ್ಷ ರೂ. ಹಣ ಹಾಕ್ತಿನಿ ಅಂದ್ರು ಹಾಕಿದ್ರಾ? ಕೊಟ್ಟ‌ ಮಾತಿಗೆ ತಪ್ಪಿದ ಬಿಜೆಪಿ, ಕೊಟ್ಟ ಮಾತಿಗೆ ನಡೆದುಕೊಂಡ ಕಾಂಗ್ರೆಸ್ ಎರಡರ ನಡುವೆ ಚುನಾವಣೆ‌‌ ನಡಿತಾ‌ ಇದೆ ಯಾರಿಗೆ ವೋಟು ಹಾಕ್ತಿರಾ? ಬಣ್ಣದ ಮಾತು ಆಡುವ ಬಿಜೆಪಿ ಅವರಿಗೆ ವೋಟ್ ಹಾಕಬೇಡಿ, ನನ್ನ ಮೇಲೆ, ನಾಗೇಂದ್ರ ‌ಮೇಲೂ ಸುಳ್ಳು ‌ಕೇಸ್ ಹಾಕಿಸಿವೆ ಬಿಜೆಪಿ‌ ಗಿರಾಕಿಗಳು. ನಿಮ್ಮ ಆಶೀರ್ವಾದ ಇರೋವರೆಗೂ ನನಗೆ ಏನೂ ಆಗಲ್ಲ. ನೀವೆಲ್ಲ ತಪ್ಪದೇ ಕಾಂಗ್ರೆಸ್ ಗುರುತಿಗೆ ವೋಟು ಹಾಕಿ ಅನ್ನಪೂರ್ಣ ಅವರನ್ನು ಗೆಲ್ಲಿಸಿ ಎಂದು ಸಿದ್ದರಾಮಯ್ಯ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು