7:29 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ: ಎಐಸಿಸಿ ವಕ್ತಾರ ಸಪ್ನಾಲ್ ಆರೋಪ

21/04/2023, 20:22

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ಬಿಜೆಪಿ ಸರಕಾರದ ವ್ಯಾಪಕ ಭ್ರಷ್ಟಚಾರ ನಡೆದಿದೆ ಎಂದು ಎಐಸಿಸಿ ವಕ್ತಾರ ಚರಣ್‌ಸಿಂಗ್ ಸಪ್ನಾಲ್ ಆರೋಪಿಸಿದ್ದಾರೆ.
ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಎಂದರೆ ಭ್ರಷ್ಟಚಾರಿ ಜನತಾ ಪಕ್ಷ . ಕರ್ನಾಟಕದ ಬಿಜೆಪಿ ಸರಕಾರ ಶೇ.40 ಕಮಿಷನ್ ಸರಕಾರವೆಂದೇ ದೇಶದಲ್ಲಿ ಕುಖ್ಯಾತಿಯನ್ನು ಪಡೆದಿದೆ. ಕರ್ನಾಟಕದಲ್ಲಿ
ಬಿಜೆಪಿ ಆಡಳಿತದಲ್ಲಿ ಟೆಂಡರ್ ಹಗರಣ, ಪಿಎಸ್‌ಐ ನೇಮಕಾತಿ ಹಗರಣ, ಭೂ ಹಗರಣ, ಕೋವಿಡ್ ಹಗರಣ, ಬಿಟ್‌ಕಾಯಿನ್ ಹಗರಣ ಸೇರಿದಂತೆ
ಹಲವಾರು ಹಗರಣಗಳು ನಡೆದಿವೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಇದರ ಬಗ್ಗೆ ಯಾವುದೇ ಚಕಾರವೆತ್ತಿಲ್ಲ. ನರೇಂದ್ರ ಮೋದಿಯವರು ಕೆ.ಎಸ್.ಈಶ್ವರಪ್ಪ ಅವರಿಗೆ ಕರೆ ಮಾಡಿ ಶ್ಲಾಘನೆ ವ್ಯಕ್ತಪಡಿಸಿರುವ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈಶ್ವರಪ್ಪ ಅವರ ಮೇಲೆ ಅವರದ್ದೇ ಪಕ್ಷದ ಕಾರ್ಯಕರ್ತ ಸಂತೋಷ್ ಎಂಬವರು ಭ್ರಷ್ಟಚಾರದ ಆರೋಪ ಮಾಡಿ ಸಾವಿಗೆ ಶರಣಾಗಿದ್ದರು.ಮೋದಿಯವರು ಆಗ ಸಂತೋಷ್ ಕುಟುಂಬಕ್ಕೆ ಕರೆ ಮಾಡಿ ಸಾಂತ್ವನ ಹೇಳುವ ಕಾರ್ಯ ಮಾಡಲಿಲ್ಲ. ಮೋದಿಯವರ ನಡೆ ಭ್ರಷ್ಟಚಾರಕ್ಕೆ ಅಧಿಕೃತ ಮುದ್ರೆಯೊತ್ತಿದಂತಾಗಿದೆ ಎಂದವರು ಆರೋಪಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮೂಡುಬಿದಿರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಮುಖಂಡರಾದ ಎ.ಸಿ.ವಿನಯರಾಜ್,
ಸಂತೋಷ್ ಕುಮಾರ್ ಶೆಟ್ಟಿ, ನೀರಜ್‌ಪಾಲ್,ವಸಂತ ಬೆನಾರ್ಡ್,ಶುಬೋಧಯ ಆಳ್ವ, ಶಾಲೆಟ್ ಪಿಂಟೋ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು