7:55 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮೋದಿ ಸರ್ಕಾರದ ಸರ್ವಸ್ಪರ್ಶಿ ಬಜೆಟ್: ಶಾಸಕ ವೇದವ್ಯಾಸ ಕಾಮತ್ ಶ್ಲಾಘನೆ

01/02/2025, 20:18

ಮಂಗಳೂರು(reporterkarnataka.com): ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ದಾಖಲೆಯ ಎಂಟನೇ ಬಾರಿಯ 2025-26 ನೇ ಸಾಲಿನ ವಿಕಸಿತ ಬಜೆಟ್‌ ನವ ಭಾರತಕ್ಕೆ ಹೊಸ ಶಕ್ತಿಯನ್ನು ತುಂಬುವುದರ ಜೊತೆಗೆ ರಾಷ್ಟ್ರವು ಜಾಗತಿಕ ಮಟ್ಟದಲ್ಲಿ ಸದೃಢವಾಗಿ ಬೆಳೆಯುತ್ತಿರುವುದರ ಸಂಕೇತವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಬಜೆಟ್ ನಲ್ಲಿ ತೆರಿಗೆದಾರರಿಗೆ 12 ಲಕ್ಷದವರೆಗಿನ ಆದಾಯ ತೆರಿಗೆ ರದ್ದುಪಡಿಸಿರುವುದು ಅತ್ಯಂತ ದೊಡ್ಡ ನಿರ್ಧಾರವಾಗಿದ್ದು, ಕ್ಯಾನ್ಸರ್‌ ಔಷಧ, ಎಲೆಕ್ಟ್ರಿಕ್‌ ವಾಹನಗಳು, ಮೊಬೈಲ್‌ ಫೋನ್, ಎಲ್‌ಇಡಿ ಟಿವಿ, ಚರ್ಮದ ಉತ್ಪನ್ನಗಳು, ಸ್ವದೇಶಿ ಬಟ್ಟೆಗಳು ಹೀಗೆ ಹತ್ತು ಹಲವು ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಲಾಗಿದ್ದು ಬಡ ಹಾಗೂ ಮಧ್ಯಮ ವರ್ಗದ ಹರ್ಷಕ್ಕೆ ಕಾರಣವಾಗಿದೆ. ಸಣ್ಣ, ಮಧ್ಯಮ ಉದ್ದಿಮೆದಾರರಿಗೆ 20 ಕೋಟಿವರೆಗೆ ಸಾಲ, ಎಸ್ಸಿ ಎಸ್ಟಿ ಮಹಿಳಾ ಉದ್ದಿಮೆದಾರರಿಗೆ 2 ಕೋಟಿವರೆಗೆ ವಿಶೇಷ ಸಾಲ, ಬೀದಿಬದಿ ವ್ಯಾಪಾರಿಗಳಿಗೆ ಸಾಲ, ಕೃಷಿಕರಿಗೆ-ಮಹಿಳೆಯರಿಗೆ-ಯುವಕರಿಗೆ- ಹಿರಿಯರಿಗೆ ವಿಶೇಷ ಆದ್ಯತೆ ಹೀಗೆ ಪ್ರತಿಯೊಂದು ಕ್ಷೇತ್ರಕ್ಕೂ ವಿಶೇಷವಾಗಿ ಗಮನ ಹರಿಸಲಾಗಿರುವ ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದಿದ್ದಾರೆ.
ಎಂದಿನಂತೆ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಹತಾಶೆಯಲ್ಲಿ ಅನಗತ್ಯ ಟೀಕೆ ಮಾಡುತ್ತಿದ್ದರೂ ದೇಶದ ಜನತೆ ಅದಕ್ಕೆಲ್ಲ ಹೆಚ್ಚಿನ ಪ್ರಾಶಸ್ತ್ಯ ನೀಡದೇ ಈ ಬಾರಿಯ ಕೇಂದ್ರದ ಬಜೆಟ್ ನಿಂದ ಸಂತಸಗೊಂಡಿರುವುದು ಗಮನಾರ್ಹ ಸಂಗತಿ ಎಂದು ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು