9:37 PM Wednesday8 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ಮೋದಿ ಸರ್ಕಾರದ ಸರ್ವಸ್ಪರ್ಶಿ ಬಜೆಟ್: ಶಾಸಕ ವೇದವ್ಯಾಸ ಕಾಮತ್ ಶ್ಲಾಘನೆ

01/02/2025, 20:18

ಮಂಗಳೂರು(reporterkarnataka.com): ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ದಾಖಲೆಯ ಎಂಟನೇ ಬಾರಿಯ 2025-26 ನೇ ಸಾಲಿನ ವಿಕಸಿತ ಬಜೆಟ್‌ ನವ ಭಾರತಕ್ಕೆ ಹೊಸ ಶಕ್ತಿಯನ್ನು ತುಂಬುವುದರ ಜೊತೆಗೆ ರಾಷ್ಟ್ರವು ಜಾಗತಿಕ ಮಟ್ಟದಲ್ಲಿ ಸದೃಢವಾಗಿ ಬೆಳೆಯುತ್ತಿರುವುದರ ಸಂಕೇತವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಬಜೆಟ್ ನಲ್ಲಿ ತೆರಿಗೆದಾರರಿಗೆ 12 ಲಕ್ಷದವರೆಗಿನ ಆದಾಯ ತೆರಿಗೆ ರದ್ದುಪಡಿಸಿರುವುದು ಅತ್ಯಂತ ದೊಡ್ಡ ನಿರ್ಧಾರವಾಗಿದ್ದು, ಕ್ಯಾನ್ಸರ್‌ ಔಷಧ, ಎಲೆಕ್ಟ್ರಿಕ್‌ ವಾಹನಗಳು, ಮೊಬೈಲ್‌ ಫೋನ್, ಎಲ್‌ಇಡಿ ಟಿವಿ, ಚರ್ಮದ ಉತ್ಪನ್ನಗಳು, ಸ್ವದೇಶಿ ಬಟ್ಟೆಗಳು ಹೀಗೆ ಹತ್ತು ಹಲವು ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಲಾಗಿದ್ದು ಬಡ ಹಾಗೂ ಮಧ್ಯಮ ವರ್ಗದ ಹರ್ಷಕ್ಕೆ ಕಾರಣವಾಗಿದೆ. ಸಣ್ಣ, ಮಧ್ಯಮ ಉದ್ದಿಮೆದಾರರಿಗೆ 20 ಕೋಟಿವರೆಗೆ ಸಾಲ, ಎಸ್ಸಿ ಎಸ್ಟಿ ಮಹಿಳಾ ಉದ್ದಿಮೆದಾರರಿಗೆ 2 ಕೋಟಿವರೆಗೆ ವಿಶೇಷ ಸಾಲ, ಬೀದಿಬದಿ ವ್ಯಾಪಾರಿಗಳಿಗೆ ಸಾಲ, ಕೃಷಿಕರಿಗೆ-ಮಹಿಳೆಯರಿಗೆ-ಯುವಕರಿಗೆ- ಹಿರಿಯರಿಗೆ ವಿಶೇಷ ಆದ್ಯತೆ ಹೀಗೆ ಪ್ರತಿಯೊಂದು ಕ್ಷೇತ್ರಕ್ಕೂ ವಿಶೇಷವಾಗಿ ಗಮನ ಹರಿಸಲಾಗಿರುವ ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದಿದ್ದಾರೆ.
ಎಂದಿನಂತೆ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಹತಾಶೆಯಲ್ಲಿ ಅನಗತ್ಯ ಟೀಕೆ ಮಾಡುತ್ತಿದ್ದರೂ ದೇಶದ ಜನತೆ ಅದಕ್ಕೆಲ್ಲ ಹೆಚ್ಚಿನ ಪ್ರಾಶಸ್ತ್ಯ ನೀಡದೇ ಈ ಬಾರಿಯ ಕೇಂದ್ರದ ಬಜೆಟ್ ನಿಂದ ಸಂತಸಗೊಂಡಿರುವುದು ಗಮನಾರ್ಹ ಸಂಗತಿ ಎಂದು ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು