5:48 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮೋದಿ ಸರ್ಕಾರದ ಸರ್ವಸ್ಪರ್ಶಿ ಬಜೆಟ್: ಶಾಸಕ ವೇದವ್ಯಾಸ ಕಾಮತ್ ಶ್ಲಾಘನೆ

01/02/2025, 20:18

ಮಂಗಳೂರು(reporterkarnataka.com): ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ದಾಖಲೆಯ ಎಂಟನೇ ಬಾರಿಯ 2025-26 ನೇ ಸಾಲಿನ ವಿಕಸಿತ ಬಜೆಟ್‌ ನವ ಭಾರತಕ್ಕೆ ಹೊಸ ಶಕ್ತಿಯನ್ನು ತುಂಬುವುದರ ಜೊತೆಗೆ ರಾಷ್ಟ್ರವು ಜಾಗತಿಕ ಮಟ್ಟದಲ್ಲಿ ಸದೃಢವಾಗಿ ಬೆಳೆಯುತ್ತಿರುವುದರ ಸಂಕೇತವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಬಜೆಟ್ ನಲ್ಲಿ ತೆರಿಗೆದಾರರಿಗೆ 12 ಲಕ್ಷದವರೆಗಿನ ಆದಾಯ ತೆರಿಗೆ ರದ್ದುಪಡಿಸಿರುವುದು ಅತ್ಯಂತ ದೊಡ್ಡ ನಿರ್ಧಾರವಾಗಿದ್ದು, ಕ್ಯಾನ್ಸರ್‌ ಔಷಧ, ಎಲೆಕ್ಟ್ರಿಕ್‌ ವಾಹನಗಳು, ಮೊಬೈಲ್‌ ಫೋನ್, ಎಲ್‌ಇಡಿ ಟಿವಿ, ಚರ್ಮದ ಉತ್ಪನ್ನಗಳು, ಸ್ವದೇಶಿ ಬಟ್ಟೆಗಳು ಹೀಗೆ ಹತ್ತು ಹಲವು ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಲಾಗಿದ್ದು ಬಡ ಹಾಗೂ ಮಧ್ಯಮ ವರ್ಗದ ಹರ್ಷಕ್ಕೆ ಕಾರಣವಾಗಿದೆ. ಸಣ್ಣ, ಮಧ್ಯಮ ಉದ್ದಿಮೆದಾರರಿಗೆ 20 ಕೋಟಿವರೆಗೆ ಸಾಲ, ಎಸ್ಸಿ ಎಸ್ಟಿ ಮಹಿಳಾ ಉದ್ದಿಮೆದಾರರಿಗೆ 2 ಕೋಟಿವರೆಗೆ ವಿಶೇಷ ಸಾಲ, ಬೀದಿಬದಿ ವ್ಯಾಪಾರಿಗಳಿಗೆ ಸಾಲ, ಕೃಷಿಕರಿಗೆ-ಮಹಿಳೆಯರಿಗೆ-ಯುವಕರಿಗೆ- ಹಿರಿಯರಿಗೆ ವಿಶೇಷ ಆದ್ಯತೆ ಹೀಗೆ ಪ್ರತಿಯೊಂದು ಕ್ಷೇತ್ರಕ್ಕೂ ವಿಶೇಷವಾಗಿ ಗಮನ ಹರಿಸಲಾಗಿರುವ ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದಿದ್ದಾರೆ.
ಎಂದಿನಂತೆ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಹತಾಶೆಯಲ್ಲಿ ಅನಗತ್ಯ ಟೀಕೆ ಮಾಡುತ್ತಿದ್ದರೂ ದೇಶದ ಜನತೆ ಅದಕ್ಕೆಲ್ಲ ಹೆಚ್ಚಿನ ಪ್ರಾಶಸ್ತ್ಯ ನೀಡದೇ ಈ ಬಾರಿಯ ಕೇಂದ್ರದ ಬಜೆಟ್ ನಿಂದ ಸಂತಸಗೊಂಡಿರುವುದು ಗಮನಾರ್ಹ ಸಂಗತಿ ಎಂದು ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು