8:19 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮೋದಿ ಸರಕಾರಕ್ಕೆ 8ನೇ ವರ್ಷಾಚರಣೆ:  ಮೇ 30ರಿಂದ ಜೂನ್ 14ವರೆಗೆ ಬಿಜೆಪಿಯಿಂದ ಬೃಹತ್‌ ಪ್ರಚಾರಾಂದೋಲನ

29/05/2022, 12:17

ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯು ಮೇ 30ರಿಂದ ಜೂನ್‌ 14ರ ವರೆಗೆ ದೇಶದಾದ್ಯಂತ ಬೃಹತ್‌ ಪ್ರಚಾರಾಂದೋಲನ ಹಮ್ಮಿಕೊಂಡಿದೆ.

ಈ ಕುರಿತು  ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್, ಈ ಕಾರ್ಯಕ್ರಮದಲ್ಲಿ ಕೇಂದ್ರದ ಎಲ್ಲ ಸಚಿವರು, ಬಿಜೆಪಿ ನೇತೃತ್ವದ ರಾಜ್ಯಗಳ ಮಂತ್ರಿಗಳು, ಪಕ್ಷದ ಚುನಾಯಿತ ಪ್ರತಿನಿಧಿಗಳು ಪಾಲ್ಗೊಳ್ಳುವರು. ಬಡವರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಹಾಗೂ ಉತ್ತಮ ಆಡಳಿತದ ಬಗ್ಗೆ ಜನರಿಗೆ ಮಾಹಿತಿ ನೀಡುವರು ಎಂದರು.

ಮೇ 30ರಂದು ಕೋವಿಡ್‌ನಿಂದಾಗಿ ಅನಾಥರಾಗಿರುವ ಮಕ್ಕಳಿಗೆ ಪ್ರಧಾನಿ ಮೋದಿ ಅವರು ಪರಿಹಾರ ಧನದ ಚೆಕ್‌ಗಳನ್ನು ವಿತರಿಸುವರು. ಅವರಿಗೆ ವಿದ್ಯಾರ್ಥಿವೇತನವನ್ನು ಅದೇ ದಿನ ಘೋಷಿಸುವರು ಎಂದು ತಿಳಿಸಿದರು.

‘ಸೇವೆ, ಉತ್ತಮ ಆಡಳಿತ, ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಕಾರ್ಯಕ್ರಮಗಳು ಮೋದಿ ನೇತೃತ್ವದ ಸರ್ಕಾರದ ಆದ್ಯತೆಗಳಾಗಿವೆ. ಈ ಬಗ್ಗೆ ದೇಶದ ಪ್ರತಿ ಪ್ರಜೆಗೂ ಮಾಹಿತಿ ನೀಡಲು ಪ್ರಚಾರಾಂದೋಲನ ವೇಳೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಇದಕ್ಕಾಗಿ ಈ ಅವಧಿಯಲ್ಲಿ ಬೂತ್‌ನಿಂದ ರಾಷ್ಟ್ರ ಮಟ್ಟದ ವರೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು  ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು