2:00 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೋದಿ ಸರಕಾರಕ್ಕೆ 8ನೇ ವರ್ಷಾಚರಣೆ:  ಮೇ 30ರಿಂದ ಜೂನ್ 14ವರೆಗೆ ಬಿಜೆಪಿಯಿಂದ ಬೃಹತ್‌ ಪ್ರಚಾರಾಂದೋಲನ

29/05/2022, 12:17

ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯು ಮೇ 30ರಿಂದ ಜೂನ್‌ 14ರ ವರೆಗೆ ದೇಶದಾದ್ಯಂತ ಬೃಹತ್‌ ಪ್ರಚಾರಾಂದೋಲನ ಹಮ್ಮಿಕೊಂಡಿದೆ.

ಈ ಕುರಿತು  ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್, ಈ ಕಾರ್ಯಕ್ರಮದಲ್ಲಿ ಕೇಂದ್ರದ ಎಲ್ಲ ಸಚಿವರು, ಬಿಜೆಪಿ ನೇತೃತ್ವದ ರಾಜ್ಯಗಳ ಮಂತ್ರಿಗಳು, ಪಕ್ಷದ ಚುನಾಯಿತ ಪ್ರತಿನಿಧಿಗಳು ಪಾಲ್ಗೊಳ್ಳುವರು. ಬಡವರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಹಾಗೂ ಉತ್ತಮ ಆಡಳಿತದ ಬಗ್ಗೆ ಜನರಿಗೆ ಮಾಹಿತಿ ನೀಡುವರು ಎಂದರು.

ಮೇ 30ರಂದು ಕೋವಿಡ್‌ನಿಂದಾಗಿ ಅನಾಥರಾಗಿರುವ ಮಕ್ಕಳಿಗೆ ಪ್ರಧಾನಿ ಮೋದಿ ಅವರು ಪರಿಹಾರ ಧನದ ಚೆಕ್‌ಗಳನ್ನು ವಿತರಿಸುವರು. ಅವರಿಗೆ ವಿದ್ಯಾರ್ಥಿವೇತನವನ್ನು ಅದೇ ದಿನ ಘೋಷಿಸುವರು ಎಂದು ತಿಳಿಸಿದರು.

‘ಸೇವೆ, ಉತ್ತಮ ಆಡಳಿತ, ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಕಾರ್ಯಕ್ರಮಗಳು ಮೋದಿ ನೇತೃತ್ವದ ಸರ್ಕಾರದ ಆದ್ಯತೆಗಳಾಗಿವೆ. ಈ ಬಗ್ಗೆ ದೇಶದ ಪ್ರತಿ ಪ್ರಜೆಗೂ ಮಾಹಿತಿ ನೀಡಲು ಪ್ರಚಾರಾಂದೋಲನ ವೇಳೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಇದಕ್ಕಾಗಿ ಈ ಅವಧಿಯಲ್ಲಿ ಬೂತ್‌ನಿಂದ ರಾಷ್ಟ್ರ ಮಟ್ಟದ ವರೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು  ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು