1:18 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮೋದಿ – ಶಾ ಜೋಡಿ ದೇಶದಲ್ಲೇ ಮಾಡಿದೆ ಮೋಡಿ: ತೀರ್ಥಹಳ್ಳಿ ವಿಜಯೋತ್ಸವದಲ್ಲಿ ಆರಗ ಜ್ಞಾನೇಂದ್ರ

09/02/2025, 12:05

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಅತ್ಯಂತ ಸಂತೋಷದ ಕ್ಷಣದಲ್ಲಿ ನಾವಿದ್ದೇವೆ. ಒಂದು ಕಾಲು ಶತಮಾನಕ್ಕಿಂತ ಹೆಚ್ಚು ದೆಹಲಿಯಲ್ಲಿ ಅಧಿಕಾರ ವಂಚಿತರಾಗಿದ್ದವು. ಜನಸಂಘ ಕಾಲದಲ್ಲಿ ಮೊದಲು ದೆಹಲಿಯಲ್ಲಿಯೇ ಅಧಿಕಾರ ಸಿಕ್ಕಿದ್ದು. ಆಗಿನ ಸಂದರ್ಭದಲ್ಲಿ ಎಲ್ಲಿಯೂ ಅಧಿಕಾರ ಇಲ್ಲದಿದ್ದರೂ ದೆಹಲಿಯಲ್ಲಿ ಅಧಿಕಾರ ಇದೆ ಎಂದು ನಾವೆಲ್ಲರೂ ಬೀಗುತ್ತಿದ್ದೆವು. ಅಲ್ಲಿನ ಅಧಿಕಾರವನ್ನು ಉಪಯೋಗಿಸಿಕೊಂಡು ಇಡೀ ದೇಶದಲ್ಲೇ ಬಿಜೆಪಿ ಗೆಲುವು ಕಂಡಿತ್ತು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ತೀರ್ಥಹಳ್ಳಿಯ ಕೊಪ್ಪ ಸರ್ಕಲ್‌ನಲ್ಲಿ ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ಏರಿದ ಕಾರಣದಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿ ನಂತರ ಮಾತನಾಡಿದರು.
ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಜೋಡಿ ಬಹಳ ದೊಡ್ಡದಾದ ಮೋಡಿಯನ್ನ ಮಾಡಿ ದೇಶದಲ್ಲೇ ಗೆಲ್ಲುವಂತಹ ಪ್ರಯತ್ನ ಮಾಡಿದೆ. ಅರವಿಂದ ಕೇಜ್ರಿವಾಲ್ ಎಂಬ ಐಎಎಸ್ ಅಧಿಕಾರಿ ಬಹಳ ದೊಡ್ಡ ಭ್ರಮೆಯನ್ನ ದೇಶದಲ್ಲಿ ಹುಟ್ಟು ಹಾಕಿದ್ದರು. ಎಲ್ಲಾ ರಾಷ್ಟ್ರೀಯ ಪಕ್ಷಗಳು ಭ್ರಷ್ಟರು, ನಾವು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದರು. ಅದನ್ನ ಹೇಳಿಯೇ ಹೇಳಿಯೇ ಪಕ್ಷ ಕಟ್ಟುವುದರ ಒಳಗಾಗಿ ಅಧಿಕಾರದಿಂದಲೇ ಇಳಿದರು ಎಂದು ಆಪ್ ಪಕ್ಷವನ್ನು ಟೀಕಿಸಿದರು.
ಅಲ್ಪನಿಗೆ ಐಶ್ವರ್ಯ ಬಂದರೆ ಚಂದ್ರನಿಗೆ ಕೊಡೆ ಹಿಡಿದರು ಎಂಬ ಗಾದೆ ಮಾತಿದೆ. ಇವರ ಪರಿಸ್ಥಿತಿಯು ಹಾಗೆಯೇ ಆಯಿತು. ಏಕಾಏಕಿ ದೆಹಲಿ, ಪಂಜಾಬ್ ರಾಜ್ಯಗಳು ಅವರ ಪಾಲಿಗೆ ಸಿಕ್ಕವು. ಈ ಚುನಾವಣೆ ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಚುನಾವಣೆಯಾಗಿತ್ತು. ಮಹಾರಾಷ್ಟ್ರ ಹರಿಯಾಣದ ಚುನಾವಣೆಯ ಗೆಲುವು ದೆಹಲಿಗೆ ಬಿಜೆಪಿ ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ತಂದು ಕೊಟ್ಟಿತ್ತು. ಇದರಿಂದ ದೆಹಲಿ ಕೂಡ ಬಿಜೆಪಿ ಪಕ್ಷದ ಪಾಲಾಗಿದೆ ಎಂದು ಸಂಭ್ರಮ ಪಟ್ಟರು.
ಕಳೆದ ಹತ್ತು ವರ್ಷಗಳಿಂದ ಅರವಿಂದ್ ಕೇಜ್ರಿವಾಲ್ ದೆಹಲಿಯನ್ನ ಬದಲಾವಣೆ ಮಾಡುತ್ತೇನೆ ಎಂದು ಹೇಳುತ್ತಾ ಬಂದಿದ್ದಾರೆ, ಆದರೆ ಯಾವುದೇ ಅಭಿವೃದ್ಧಿ ಸಹ ಆಗಿಲ್ಲ, ಅವರು ಕೊಟ್ಟಂತಹ ಗ್ಯಾರಂಟಿಯ ಭ್ರಮೆಯಿಂದ ಜನರು ಮತ ನೀಡುತ್ತಿದ್ದರು. ಯಮುನಾ ನದಿಗೆ ಹರಿಯಾಣ ವಿಷ ಹಾಕಿದೆ ಎಂದು ಸುಳ್ಳು ಹೇಳಿದ್ದರು, ಸುಳ್ಳು ಹೇಳಿ ಚುನಾವಣೆ ಗೆಲ್ಲಬಹುದೆಂದು ಅವರು ಭಾವಿಸಿದ್ದರು. ಆದರೆ ಅದೇ ಈಗ ಅವರಿಗೆ ತಿರುಗು ಬಾಣವಾಗಿದೆ ಎಂದರು.
ಈ ದೇಶವನ್ನು ಅರವತ್ತರಿಂದ ಎಪ್ಪತ್ತು ವರ್ಷಗಳ ಕಾಲ ಆಳಿದ್ದಂತಹ, ನನ್ನ ನಂತರ ಯಾರಿಲ್ಲ ನನಗೆ ಸೋಲೆ ಇಲ್ಲ ಎಂದು ಬೀಗುತ್ತಿದ್ದ ಕಾಂಗ್ರೆಸ್ ಪಕ್ಷ ಈ ಚುನಾವಣೆಯಲ್ಲಿ ಶೂನ್ಯ ಸಂಪಾದನೆ ಮಾಡಿದೆ.
ಒಂದು ಸ್ಥಾನವನ್ನು ಗೆಲ್ಲಲು ಆಗದಂತಹ ನಾಚಿಕೆಗೇಡಿನ ಸಂಗತಿ ಇವತ್ತು ದೇಶದ ಎದುರುಗಡೆಗೆ ನಿಂತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು