8:11 PM Friday21 - March 2025
ಬ್ರೇಕಿಂಗ್ ನ್ಯೂಸ್
ಅಂಗನವಾಡಿ ಆಹಾರ ಗುಣಮಟ್ಟದ ನಿರ್ಲಕ್ಷ್ಯ ವಹಿಸಿದರೆ ಉಪನಿರ್ದೇಶಕರ ಮೇಲೆ ಕ್ರಮ: ಸಚಿವೆ ಲಕ್ಷ್ಮೀ… ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸ್ಪೀಕರ್ ಖಾದರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರತಿಪಕ್ಷದ… ಶಿವಮೊಗ್ಗ ಜನೌಷಧಿ ಕೇಂದ್ರದಲ್ಲಿ ಇತರ ಔಷಧಿ, ಮಾತ್ರೆಗಳ ಮಾರಾಟ: ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ… Minior Student Suicide | ಚಿಕ್ಕಮಗಳೂರು: ಫೇಲ್ ಆಗುವ ಭಯದಿಂದ 9ನೇ ತರಗತಿ… ಅಂಗನವಾಡಿ: 2011ರ ನಂತರ ನಿವೃತ್ತಿಯಾದವರಿಗೆ ಗ್ರ್ಯಾಚ್ಯುಟಿ; ಸಿಎಂ ಜೊತೆ ಚರ್ಚಿಸಿ ಕ್ರಮ: ಸಚಿವೆ… Legislative Council | ಜಲ‌ ಮತ್ತು ವಾಯು ಕಾಯ್ದೆ ಉಲ್ಲಂಘಿಸುವ ಕೈಗಾರಿಕೆಗಳ ವಿರುದ್ಧ… ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ.… Primary Teachers | ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ… ಬೆಂಗಳೂರು: 20ರಿಂದ 4 ದಿನಗಳ ಕಾಲ ಲೇಸರ್ ಚಿಕಿತ್ಸೆ, ಸರ್ಜರಿ ಅಂತಾರಾಷ್ಟ್ರೀಯ ಸಮ್ಮೇಳನ

ಇತ್ತೀಚಿನ ಸುದ್ದಿ

ಮೋದಿ – ಶಾ ಜೋಡಿ ದೇಶದಲ್ಲೇ ಮಾಡಿದೆ ಮೋಡಿ: ತೀರ್ಥಹಳ್ಳಿ ವಿಜಯೋತ್ಸವದಲ್ಲಿ ಆರಗ ಜ್ಞಾನೇಂದ್ರ

09/02/2025, 12:05

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಅತ್ಯಂತ ಸಂತೋಷದ ಕ್ಷಣದಲ್ಲಿ ನಾವಿದ್ದೇವೆ. ಒಂದು ಕಾಲು ಶತಮಾನಕ್ಕಿಂತ ಹೆಚ್ಚು ದೆಹಲಿಯಲ್ಲಿ ಅಧಿಕಾರ ವಂಚಿತರಾಗಿದ್ದವು. ಜನಸಂಘ ಕಾಲದಲ್ಲಿ ಮೊದಲು ದೆಹಲಿಯಲ್ಲಿಯೇ ಅಧಿಕಾರ ಸಿಕ್ಕಿದ್ದು. ಆಗಿನ ಸಂದರ್ಭದಲ್ಲಿ ಎಲ್ಲಿಯೂ ಅಧಿಕಾರ ಇಲ್ಲದಿದ್ದರೂ ದೆಹಲಿಯಲ್ಲಿ ಅಧಿಕಾರ ಇದೆ ಎಂದು ನಾವೆಲ್ಲರೂ ಬೀಗುತ್ತಿದ್ದೆವು. ಅಲ್ಲಿನ ಅಧಿಕಾರವನ್ನು ಉಪಯೋಗಿಸಿಕೊಂಡು ಇಡೀ ದೇಶದಲ್ಲೇ ಬಿಜೆಪಿ ಗೆಲುವು ಕಂಡಿತ್ತು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ತೀರ್ಥಹಳ್ಳಿಯ ಕೊಪ್ಪ ಸರ್ಕಲ್‌ನಲ್ಲಿ ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ಏರಿದ ಕಾರಣದಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿ ನಂತರ ಮಾತನಾಡಿದರು.
ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಜೋಡಿ ಬಹಳ ದೊಡ್ಡದಾದ ಮೋಡಿಯನ್ನ ಮಾಡಿ ದೇಶದಲ್ಲೇ ಗೆಲ್ಲುವಂತಹ ಪ್ರಯತ್ನ ಮಾಡಿದೆ. ಅರವಿಂದ ಕೇಜ್ರಿವಾಲ್ ಎಂಬ ಐಎಎಸ್ ಅಧಿಕಾರಿ ಬಹಳ ದೊಡ್ಡ ಭ್ರಮೆಯನ್ನ ದೇಶದಲ್ಲಿ ಹುಟ್ಟು ಹಾಕಿದ್ದರು. ಎಲ್ಲಾ ರಾಷ್ಟ್ರೀಯ ಪಕ್ಷಗಳು ಭ್ರಷ್ಟರು, ನಾವು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದರು. ಅದನ್ನ ಹೇಳಿಯೇ ಹೇಳಿಯೇ ಪಕ್ಷ ಕಟ್ಟುವುದರ ಒಳಗಾಗಿ ಅಧಿಕಾರದಿಂದಲೇ ಇಳಿದರು ಎಂದು ಆಪ್ ಪಕ್ಷವನ್ನು ಟೀಕಿಸಿದರು.
ಅಲ್ಪನಿಗೆ ಐಶ್ವರ್ಯ ಬಂದರೆ ಚಂದ್ರನಿಗೆ ಕೊಡೆ ಹಿಡಿದರು ಎಂಬ ಗಾದೆ ಮಾತಿದೆ. ಇವರ ಪರಿಸ್ಥಿತಿಯು ಹಾಗೆಯೇ ಆಯಿತು. ಏಕಾಏಕಿ ದೆಹಲಿ, ಪಂಜಾಬ್ ರಾಜ್ಯಗಳು ಅವರ ಪಾಲಿಗೆ ಸಿಕ್ಕವು. ಈ ಚುನಾವಣೆ ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಚುನಾವಣೆಯಾಗಿತ್ತು. ಮಹಾರಾಷ್ಟ್ರ ಹರಿಯಾಣದ ಚುನಾವಣೆಯ ಗೆಲುವು ದೆಹಲಿಗೆ ಬಿಜೆಪಿ ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ತಂದು ಕೊಟ್ಟಿತ್ತು. ಇದರಿಂದ ದೆಹಲಿ ಕೂಡ ಬಿಜೆಪಿ ಪಕ್ಷದ ಪಾಲಾಗಿದೆ ಎಂದು ಸಂಭ್ರಮ ಪಟ್ಟರು.
ಕಳೆದ ಹತ್ತು ವರ್ಷಗಳಿಂದ ಅರವಿಂದ್ ಕೇಜ್ರಿವಾಲ್ ದೆಹಲಿಯನ್ನ ಬದಲಾವಣೆ ಮಾಡುತ್ತೇನೆ ಎಂದು ಹೇಳುತ್ತಾ ಬಂದಿದ್ದಾರೆ, ಆದರೆ ಯಾವುದೇ ಅಭಿವೃದ್ಧಿ ಸಹ ಆಗಿಲ್ಲ, ಅವರು ಕೊಟ್ಟಂತಹ ಗ್ಯಾರಂಟಿಯ ಭ್ರಮೆಯಿಂದ ಜನರು ಮತ ನೀಡುತ್ತಿದ್ದರು. ಯಮುನಾ ನದಿಗೆ ಹರಿಯಾಣ ವಿಷ ಹಾಕಿದೆ ಎಂದು ಸುಳ್ಳು ಹೇಳಿದ್ದರು, ಸುಳ್ಳು ಹೇಳಿ ಚುನಾವಣೆ ಗೆಲ್ಲಬಹುದೆಂದು ಅವರು ಭಾವಿಸಿದ್ದರು. ಆದರೆ ಅದೇ ಈಗ ಅವರಿಗೆ ತಿರುಗು ಬಾಣವಾಗಿದೆ ಎಂದರು.
ಈ ದೇಶವನ್ನು ಅರವತ್ತರಿಂದ ಎಪ್ಪತ್ತು ವರ್ಷಗಳ ಕಾಲ ಆಳಿದ್ದಂತಹ, ನನ್ನ ನಂತರ ಯಾರಿಲ್ಲ ನನಗೆ ಸೋಲೆ ಇಲ್ಲ ಎಂದು ಬೀಗುತ್ತಿದ್ದ ಕಾಂಗ್ರೆಸ್ ಪಕ್ಷ ಈ ಚುನಾವಣೆಯಲ್ಲಿ ಶೂನ್ಯ ಸಂಪಾದನೆ ಮಾಡಿದೆ.
ಒಂದು ಸ್ಥಾನವನ್ನು ಗೆಲ್ಲಲು ಆಗದಂತಹ ನಾಚಿಕೆಗೇಡಿನ ಸಂಗತಿ ಇವತ್ತು ದೇಶದ ಎದುರುಗಡೆಗೆ ನಿಂತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು