9:22 PM Sunday17 - August 2025
ಬ್ರೇಕಿಂಗ್ ನ್ಯೂಸ್
ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:…

ಇತ್ತೀಚಿನ ಸುದ್ದಿ

ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆ: ಕ್ರಿಸ್ಮಸ್ ಸಂಭ್ರಮಾಚರಣೆ

27/12/2024, 13:01

ಬಂಟ್ವಾಳ(reporterkarnataka.com): ಸುದೀರ್ಘ ವರ್ಷಗಳ ಇತಿಹಾಸವನ್ನು ಹೊಂದಿರುವ ಅಮ್ಟೂರು ಗ್ರಾಮದ ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚರ್ಚ್ ನಲ್ಲಿ ನಡೆದ ಕ್ರಿಸ್ಮಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅದ್ದೂರಿಯ ಚಾಲನೆ ನೀಡಲಾಯಿತು.

ಸಮಾರಂಭದಲ್ಲಿ ಮಂಗಳೂರು ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ರೆ|ಫಾ| ವಿಲ್ರೆಡ್ ಪ್ರಕಾಶ್ ಡಿಸೋಜ ಅವರು ಚರ್ಚ್ 250ನೇ ವರ್ಷಾಚರಣೆಯ ಲಾಂಛನವನ್ನು ಅನಾವರಣಗೊಳಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲಿಗೆ ಚಾಲನೆ ನೀಡಿದರು.
ಚರ್ಚ್ ವ್ಯಾಪ್ತಿಯ ಭಕ್ತರು ಐತಿಹಾಸಿಕ ಕ್ಷಣವನ್ನು ಸ್ಮರಣೀಯಗೊಳಿಸುವ ಜತೆಗೆ ಏಕತೆ, ನಂಬಿಕೆ ಮತ್ತು ಕೃತಜ್ಞತೆಯ ಸಂಕೇತವಾಗಿ ಬರೋಬ್ಬರಿ 250 ಕ್ಯಾಂಡಲ್‌ಗಳನ್ನು ಅದೇ ಸಂಖ್ಯೆಯ ಆಕಾರದಲ್ಲಿ ಜೋಡಿಸಿ ಬೆಳಗಿಸಿ ಸಂಭ್ರಮಿಸಿದರು.
ಚರ್ಚ್ನ ಪ್ರಧಾನ ಧರ್ಮಗುರು ರೆ| ಫಾ| ಅನಿಲ್ ಕೆನ್ಯುಟ್ ಡಿಮೆಲ್ಲೊ ಅವರು ವರ್ಷವಿಡೀ ನಡೆಯುವ 250ನೇ ವರ್ಷಾಚರಣೆ ಕಾರ್ಯಕ್ರಮದ ಪಟ್ಟಿಯನ್ನು ಅನಾವರಣಗೊಳಿಸಿದರು. ಆವರಣೆ ಹಾಗೂ ಕೃತಜ್ಞತೆಯಾಗಿ ವರ್ಷಾಚರಣೆಯ ಥೀಮ್ ಹಾಡನ್ನು ಪ್ರಸ್ತುತ ಪಡಿಸಲಾಯಿತು.
ಐತಿಹಾಸಿಕ ವರ್ಷಾಚರಣೆಯಲ್ಲಿ ಆಧ್ಯಾತ್ಮಿಕತೆ, ಸಮುದಾಯ ಸಂಘಟನೆ, ಸಾಂಸ್ಕೃತಿಕ ವೈಭವ ಸೇರಿದಂತೆ ಚರ್ಚಿನ ಗೌರವಯುತ ಪರಂಪರೆಯನ್ನು ಮುಂದುವರಿಸುವ ದೃಷ್ಟಿಯಿಂದ ಹತ್ತಾರು ಕಾರ್ಯಕ್ರಮಗಳನ್ನು ನಡೆಸುವ ಕುರಿತು ಈ ಸಂದರ್ಭದಲ್ಲಿ ವಿವರಿಸಲಾಯಿತು. ಸಂಭ್ರಮಾಚರಣೆಯಲ್ಲಿ ಸರ್ವರೂ ಪಾಲ್ಗೊಂಡು ಮುಂಬರುವ ಪ್ರತಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವ ದೃಷ್ಟಿಯಿಂದ ಸಹಕರಿಸಲು ವಿನಂತಿಸಲಾಯಿತು.
ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಸಂತೋಷ್ ಡಿಸೋಜ, ಕಾರ್ಯದರ್ಶಿ ವಿಲ್ರೆಡ್ ಲೋಬೊ, ಸರ್ವ ಆಯೋಗಗಳ ಸಂಚಾಲಕಿ ಎಮಿಲಿಯಾ ಡಿಕುನ್ಹಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು