12:11 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆ: ಕ್ರಿಸ್ಮಸ್ ಸಂಭ್ರಮಾಚರಣೆ

27/12/2024, 13:01

ಬಂಟ್ವಾಳ(reporterkarnataka.com): ಸುದೀರ್ಘ ವರ್ಷಗಳ ಇತಿಹಾಸವನ್ನು ಹೊಂದಿರುವ ಅಮ್ಟೂರು ಗ್ರಾಮದ ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚರ್ಚ್ ನಲ್ಲಿ ನಡೆದ ಕ್ರಿಸ್ಮಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅದ್ದೂರಿಯ ಚಾಲನೆ ನೀಡಲಾಯಿತು.

ಸಮಾರಂಭದಲ್ಲಿ ಮಂಗಳೂರು ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ರೆ|ಫಾ| ವಿಲ್ರೆಡ್ ಪ್ರಕಾಶ್ ಡಿಸೋಜ ಅವರು ಚರ್ಚ್ 250ನೇ ವರ್ಷಾಚರಣೆಯ ಲಾಂಛನವನ್ನು ಅನಾವರಣಗೊಳಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲಿಗೆ ಚಾಲನೆ ನೀಡಿದರು.
ಚರ್ಚ್ ವ್ಯಾಪ್ತಿಯ ಭಕ್ತರು ಐತಿಹಾಸಿಕ ಕ್ಷಣವನ್ನು ಸ್ಮರಣೀಯಗೊಳಿಸುವ ಜತೆಗೆ ಏಕತೆ, ನಂಬಿಕೆ ಮತ್ತು ಕೃತಜ್ಞತೆಯ ಸಂಕೇತವಾಗಿ ಬರೋಬ್ಬರಿ 250 ಕ್ಯಾಂಡಲ್‌ಗಳನ್ನು ಅದೇ ಸಂಖ್ಯೆಯ ಆಕಾರದಲ್ಲಿ ಜೋಡಿಸಿ ಬೆಳಗಿಸಿ ಸಂಭ್ರಮಿಸಿದರು.
ಚರ್ಚ್ನ ಪ್ರಧಾನ ಧರ್ಮಗುರು ರೆ| ಫಾ| ಅನಿಲ್ ಕೆನ್ಯುಟ್ ಡಿಮೆಲ್ಲೊ ಅವರು ವರ್ಷವಿಡೀ ನಡೆಯುವ 250ನೇ ವರ್ಷಾಚರಣೆ ಕಾರ್ಯಕ್ರಮದ ಪಟ್ಟಿಯನ್ನು ಅನಾವರಣಗೊಳಿಸಿದರು. ಆವರಣೆ ಹಾಗೂ ಕೃತಜ್ಞತೆಯಾಗಿ ವರ್ಷಾಚರಣೆಯ ಥೀಮ್ ಹಾಡನ್ನು ಪ್ರಸ್ತುತ ಪಡಿಸಲಾಯಿತು.
ಐತಿಹಾಸಿಕ ವರ್ಷಾಚರಣೆಯಲ್ಲಿ ಆಧ್ಯಾತ್ಮಿಕತೆ, ಸಮುದಾಯ ಸಂಘಟನೆ, ಸಾಂಸ್ಕೃತಿಕ ವೈಭವ ಸೇರಿದಂತೆ ಚರ್ಚಿನ ಗೌರವಯುತ ಪರಂಪರೆಯನ್ನು ಮುಂದುವರಿಸುವ ದೃಷ್ಟಿಯಿಂದ ಹತ್ತಾರು ಕಾರ್ಯಕ್ರಮಗಳನ್ನು ನಡೆಸುವ ಕುರಿತು ಈ ಸಂದರ್ಭದಲ್ಲಿ ವಿವರಿಸಲಾಯಿತು. ಸಂಭ್ರಮಾಚರಣೆಯಲ್ಲಿ ಸರ್ವರೂ ಪಾಲ್ಗೊಂಡು ಮುಂಬರುವ ಪ್ರತಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವ ದೃಷ್ಟಿಯಿಂದ ಸಹಕರಿಸಲು ವಿನಂತಿಸಲಾಯಿತು.
ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಸಂತೋಷ್ ಡಿಸೋಜ, ಕಾರ್ಯದರ್ಶಿ ವಿಲ್ರೆಡ್ ಲೋಬೊ, ಸರ್ವ ಆಯೋಗಗಳ ಸಂಚಾಲಕಿ ಎಮಿಲಿಯಾ ಡಿಕುನ್ಹಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು