7:24 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆ: ಕ್ರಿಸ್ಮಸ್ ಸಂಭ್ರಮಾಚರಣೆ

27/12/2024, 13:01

ಬಂಟ್ವಾಳ(reporterkarnataka.com): ಸುದೀರ್ಘ ವರ್ಷಗಳ ಇತಿಹಾಸವನ್ನು ಹೊಂದಿರುವ ಅಮ್ಟೂರು ಗ್ರಾಮದ ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚರ್ಚ್ ನಲ್ಲಿ ನಡೆದ ಕ್ರಿಸ್ಮಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅದ್ದೂರಿಯ ಚಾಲನೆ ನೀಡಲಾಯಿತು.

ಸಮಾರಂಭದಲ್ಲಿ ಮಂಗಳೂರು ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ರೆ|ಫಾ| ವಿಲ್ರೆಡ್ ಪ್ರಕಾಶ್ ಡಿಸೋಜ ಅವರು ಚರ್ಚ್ 250ನೇ ವರ್ಷಾಚರಣೆಯ ಲಾಂಛನವನ್ನು ಅನಾವರಣಗೊಳಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲಿಗೆ ಚಾಲನೆ ನೀಡಿದರು.
ಚರ್ಚ್ ವ್ಯಾಪ್ತಿಯ ಭಕ್ತರು ಐತಿಹಾಸಿಕ ಕ್ಷಣವನ್ನು ಸ್ಮರಣೀಯಗೊಳಿಸುವ ಜತೆಗೆ ಏಕತೆ, ನಂಬಿಕೆ ಮತ್ತು ಕೃತಜ್ಞತೆಯ ಸಂಕೇತವಾಗಿ ಬರೋಬ್ಬರಿ 250 ಕ್ಯಾಂಡಲ್‌ಗಳನ್ನು ಅದೇ ಸಂಖ್ಯೆಯ ಆಕಾರದಲ್ಲಿ ಜೋಡಿಸಿ ಬೆಳಗಿಸಿ ಸಂಭ್ರಮಿಸಿದರು.
ಚರ್ಚ್ನ ಪ್ರಧಾನ ಧರ್ಮಗುರು ರೆ| ಫಾ| ಅನಿಲ್ ಕೆನ್ಯುಟ್ ಡಿಮೆಲ್ಲೊ ಅವರು ವರ್ಷವಿಡೀ ನಡೆಯುವ 250ನೇ ವರ್ಷಾಚರಣೆ ಕಾರ್ಯಕ್ರಮದ ಪಟ್ಟಿಯನ್ನು ಅನಾವರಣಗೊಳಿಸಿದರು. ಆವರಣೆ ಹಾಗೂ ಕೃತಜ್ಞತೆಯಾಗಿ ವರ್ಷಾಚರಣೆಯ ಥೀಮ್ ಹಾಡನ್ನು ಪ್ರಸ್ತುತ ಪಡಿಸಲಾಯಿತು.
ಐತಿಹಾಸಿಕ ವರ್ಷಾಚರಣೆಯಲ್ಲಿ ಆಧ್ಯಾತ್ಮಿಕತೆ, ಸಮುದಾಯ ಸಂಘಟನೆ, ಸಾಂಸ್ಕೃತಿಕ ವೈಭವ ಸೇರಿದಂತೆ ಚರ್ಚಿನ ಗೌರವಯುತ ಪರಂಪರೆಯನ್ನು ಮುಂದುವರಿಸುವ ದೃಷ್ಟಿಯಿಂದ ಹತ್ತಾರು ಕಾರ್ಯಕ್ರಮಗಳನ್ನು ನಡೆಸುವ ಕುರಿತು ಈ ಸಂದರ್ಭದಲ್ಲಿ ವಿವರಿಸಲಾಯಿತು. ಸಂಭ್ರಮಾಚರಣೆಯಲ್ಲಿ ಸರ್ವರೂ ಪಾಲ್ಗೊಂಡು ಮುಂಬರುವ ಪ್ರತಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವ ದೃಷ್ಟಿಯಿಂದ ಸಹಕರಿಸಲು ವಿನಂತಿಸಲಾಯಿತು.
ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಸಂತೋಷ್ ಡಿಸೋಜ, ಕಾರ್ಯದರ್ಶಿ ವಿಲ್ರೆಡ್ ಲೋಬೊ, ಸರ್ವ ಆಯೋಗಗಳ ಸಂಚಾಲಕಿ ಎಮಿಲಿಯಾ ಡಿಕುನ್ಹಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು