10:22 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಶಾಂತಿ-ಸೌಹಾರ್ದದಿಂದ ಆಚರಿಸಬೇಕು: ಶಾಂತಿ ಸಭೆಯಲ್ಲಿ ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ

14/07/2024, 15:29

ಶಿವು ರಾಠೋಡ ಮುದ್ದೇಬಿಹಾಳ ವಿಜಯಪುರ

info.reporterkarnataka@gmail.com

ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಒಟ್ಟಿಗೆ ಶಾಂತಿ-ಸೌಹಾರ್ದದಿಂದ ಆಚರಿಸಬೇಕೆಂದು ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ ಹೇಳಿದರು.
ಇಲ್ಲಿನ ಹೊರ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದ ಮೊಹರಂ ಶಾಂತಿ ಸಭೆಯಲ್ಲಿ ಮಾತನಾಡಿದರು.
ನೂರಾರೂ ವರ್ಷಗಳಿಂದ ಸೌಹಾರ್ದದ ಪ್ರತೀಕವಾದ ನಾಲತವಾಡದಲ್ಲಿ ಮುಂದೆಯೂ ಪರಸ್ಪರ ಸಹಕಾರ ಹಾಗೂ ಸೌಹಾರ್ದದಿಂದ ಪ್ರತಿಯೊಬ್ಬರೂ ಹಬ್ಬ ಆಚರಿಸಬೇಕು. ಮೊಹರಂ ಹಬ್ಬದಲ್ಲಿ ಶಾಂತಿಗೆ ಭಂಗ ಬಾರದಂತೆ ಎಚ್ಚರಿಕೆ ವಹಿಸಬೇಕೆಂದರು,
ಕಿಡಿಗೇಡಿಗಳ ಕೃತ್ಯಕ್ಕೆ ಕಡಿವಾಣ ಹಾಕಿ, ಶಾಂತಿ ಕಾಪಾಡುವ ಅಗತ್ಯವಿದೆ. ವದಂತಿಗಳಿಗೆ ಕಿವಿಗೊಡದೆ ಸಾಮರಸ್ಯದಿಂದ ಹಬ್ಬ ಆಚರಿಸಿ ಎಂದರು.

ಹಬ್ಬದ ದಿನದಂದು ನಮ್ಮ ಇಲಾಖೆಯಿಂದ ಸೂಕ್ತ ಬಂದೋ ಬಸ್ತ್ ಒದಗಿಸುವ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ ಎಂದರು.
ಈ ವೇಳೆ ಪ್ರಮುಖರಾದ ಬಾಲಚಂದ್ರ ಗದಗಿನ ಮಾತನಾಡಿದರು.
ಸಭೆಯಲ್ಲಿ ಮುಖ್ಯ ಪೇದೆ, ಪಿ.ಎಸ್.ಪಾಟೀಲ, ಹನಮಂತ ಹೆಬ್ಬುಲಿ, ಬಸವರಾಜ ಹಿಪ್ಪರಗಿ, ಬಸವರಾಜ ಚಿಂಚೋಳಿ, ಚಿದಾನಂದ, ಮತ್ತು ಸಿಕ್ಕಲಗಾರ, ಅವಟಿ, ಖಾಜಿ, ಹವೇಲಿ, ನಾಡಗೌಡ, ಬಾರಪೇಟ, ತಳಗಿನ ಮಸೀದ್, ಜಾಲಗಾರ ಓಣಿಯ ಮಸೀದಿಯ ಪ್ರಮುಖರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು