8:49 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಶಾಂತಿ-ಸೌಹಾರ್ದದಿಂದ ಆಚರಿಸಬೇಕು: ಶಾಂತಿ ಸಭೆಯಲ್ಲಿ ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ

14/07/2024, 15:29

ಶಿವು ರಾಠೋಡ ಮುದ್ದೇಬಿಹಾಳ ವಿಜಯಪುರ

info.reporterkarnataka@gmail.com

ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಒಟ್ಟಿಗೆ ಶಾಂತಿ-ಸೌಹಾರ್ದದಿಂದ ಆಚರಿಸಬೇಕೆಂದು ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ ಹೇಳಿದರು.
ಇಲ್ಲಿನ ಹೊರ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದ ಮೊಹರಂ ಶಾಂತಿ ಸಭೆಯಲ್ಲಿ ಮಾತನಾಡಿದರು.
ನೂರಾರೂ ವರ್ಷಗಳಿಂದ ಸೌಹಾರ್ದದ ಪ್ರತೀಕವಾದ ನಾಲತವಾಡದಲ್ಲಿ ಮುಂದೆಯೂ ಪರಸ್ಪರ ಸಹಕಾರ ಹಾಗೂ ಸೌಹಾರ್ದದಿಂದ ಪ್ರತಿಯೊಬ್ಬರೂ ಹಬ್ಬ ಆಚರಿಸಬೇಕು. ಮೊಹರಂ ಹಬ್ಬದಲ್ಲಿ ಶಾಂತಿಗೆ ಭಂಗ ಬಾರದಂತೆ ಎಚ್ಚರಿಕೆ ವಹಿಸಬೇಕೆಂದರು,
ಕಿಡಿಗೇಡಿಗಳ ಕೃತ್ಯಕ್ಕೆ ಕಡಿವಾಣ ಹಾಕಿ, ಶಾಂತಿ ಕಾಪಾಡುವ ಅಗತ್ಯವಿದೆ. ವದಂತಿಗಳಿಗೆ ಕಿವಿಗೊಡದೆ ಸಾಮರಸ್ಯದಿಂದ ಹಬ್ಬ ಆಚರಿಸಿ ಎಂದರು.

ಹಬ್ಬದ ದಿನದಂದು ನಮ್ಮ ಇಲಾಖೆಯಿಂದ ಸೂಕ್ತ ಬಂದೋ ಬಸ್ತ್ ಒದಗಿಸುವ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ ಎಂದರು.
ಈ ವೇಳೆ ಪ್ರಮುಖರಾದ ಬಾಲಚಂದ್ರ ಗದಗಿನ ಮಾತನಾಡಿದರು.
ಸಭೆಯಲ್ಲಿ ಮುಖ್ಯ ಪೇದೆ, ಪಿ.ಎಸ್.ಪಾಟೀಲ, ಹನಮಂತ ಹೆಬ್ಬುಲಿ, ಬಸವರಾಜ ಹಿಪ್ಪರಗಿ, ಬಸವರಾಜ ಚಿಂಚೋಳಿ, ಚಿದಾನಂದ, ಮತ್ತು ಸಿಕ್ಕಲಗಾರ, ಅವಟಿ, ಖಾಜಿ, ಹವೇಲಿ, ನಾಡಗೌಡ, ಬಾರಪೇಟ, ತಳಗಿನ ಮಸೀದ್, ಜಾಲಗಾರ ಓಣಿಯ ಮಸೀದಿಯ ಪ್ರಮುಖರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು