4:48 PM Saturday18 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಶಾಂತಿ-ಸೌಹಾರ್ದದಿಂದ ಆಚರಿಸಬೇಕು: ಶಾಂತಿ ಸಭೆಯಲ್ಲಿ ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ

14/07/2024, 15:29

ಶಿವು ರಾಠೋಡ ಮುದ್ದೇಬಿಹಾಳ ವಿಜಯಪುರ

info.reporterkarnataka@gmail.com

ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಒಟ್ಟಿಗೆ ಶಾಂತಿ-ಸೌಹಾರ್ದದಿಂದ ಆಚರಿಸಬೇಕೆಂದು ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ ಹೇಳಿದರು.
ಇಲ್ಲಿನ ಹೊರ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದ ಮೊಹರಂ ಶಾಂತಿ ಸಭೆಯಲ್ಲಿ ಮಾತನಾಡಿದರು.
ನೂರಾರೂ ವರ್ಷಗಳಿಂದ ಸೌಹಾರ್ದದ ಪ್ರತೀಕವಾದ ನಾಲತವಾಡದಲ್ಲಿ ಮುಂದೆಯೂ ಪರಸ್ಪರ ಸಹಕಾರ ಹಾಗೂ ಸೌಹಾರ್ದದಿಂದ ಪ್ರತಿಯೊಬ್ಬರೂ ಹಬ್ಬ ಆಚರಿಸಬೇಕು. ಮೊಹರಂ ಹಬ್ಬದಲ್ಲಿ ಶಾಂತಿಗೆ ಭಂಗ ಬಾರದಂತೆ ಎಚ್ಚರಿಕೆ ವಹಿಸಬೇಕೆಂದರು,
ಕಿಡಿಗೇಡಿಗಳ ಕೃತ್ಯಕ್ಕೆ ಕಡಿವಾಣ ಹಾಕಿ, ಶಾಂತಿ ಕಾಪಾಡುವ ಅಗತ್ಯವಿದೆ. ವದಂತಿಗಳಿಗೆ ಕಿವಿಗೊಡದೆ ಸಾಮರಸ್ಯದಿಂದ ಹಬ್ಬ ಆಚರಿಸಿ ಎಂದರು.

ಹಬ್ಬದ ದಿನದಂದು ನಮ್ಮ ಇಲಾಖೆಯಿಂದ ಸೂಕ್ತ ಬಂದೋ ಬಸ್ತ್ ಒದಗಿಸುವ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ ಎಂದರು.
ಈ ವೇಳೆ ಪ್ರಮುಖರಾದ ಬಾಲಚಂದ್ರ ಗದಗಿನ ಮಾತನಾಡಿದರು.
ಸಭೆಯಲ್ಲಿ ಮುಖ್ಯ ಪೇದೆ, ಪಿ.ಎಸ್.ಪಾಟೀಲ, ಹನಮಂತ ಹೆಬ್ಬುಲಿ, ಬಸವರಾಜ ಹಿಪ್ಪರಗಿ, ಬಸವರಾಜ ಚಿಂಚೋಳಿ, ಚಿದಾನಂದ, ಮತ್ತು ಸಿಕ್ಕಲಗಾರ, ಅವಟಿ, ಖಾಜಿ, ಹವೇಲಿ, ನಾಡಗೌಡ, ಬಾರಪೇಟ, ತಳಗಿನ ಮಸೀದ್, ಜಾಲಗಾರ ಓಣಿಯ ಮಸೀದಿಯ ಪ್ರಮುಖರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು