11:07 AM Thursday9 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ನಾಪೋಕ್ಲುವಿನಲ್ಲಿ ಒಂದು ತಿಂಗಳ ಹಾಕಿ ಹಬ್ಬ: ಕೊಡವ ಕೌಟುಂಬಿಕ ಹಾಕಿ ಉತ್ಸವ ಚೇನಂಡ ಕಪ್ ಪಂದ್ಯಾವಳಿಗೆ ಚಾಲನೆ

05/04/2026, 20:20

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡವ ಕುಟುಂಬಗಳ ನಡುವಿನ ವಾರ್ಷಿಕ ಹಾಕಿ ಪಂದ್ಯಾವಳಿ 2026-27 ರ ಉದ್ಘಾಟನೆ ಕಾರ್ಯಕ್ರಮ ಇಂದು ನಾಪೋಕ್ಲುವಿನಲ್ಲಿ ಜರುಗಿತು.
ಈ ಬಾರಿಯ ಕೊಡವ ಕೌಟುಂಬಿಕ ಹಾಕಿ ಉತ್ಸವದ ಆತಿಥ್ಯವನ್ನು ಚೇನಂಡ ಕುಟುಂಬಸ್ಥರು ವಹಿಸಿಕೊಂಡಿದ್ದು, ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಉದ್ಘಾಟನೆ ನೆರವೇರಿಸಿದರು.
ಒಂದು ತಿಂಗಳ ಅವಧಿಗೆ ನಿರಂತರವಾಗಿ ನಡೆಯುವ ಈ ಪಂದ್ಯಾವಳಿಯನ್ನು ಉದ್ಘಾಟಿಸಿ ಶುಭ ಕೋರುತ್ತಾ ಮಾತನಾಡಿದ ಶಾಸಕ ಎ.ಎಸ್. ಪೊನ್ನಣ್ಣ ನಾಡಿನಾದ್ಯಂತ ಮಾತ್ರವಲ್ಲದೆ ದೇಶ ವಿದೇಶಗಳನ್ನು ಪ್ರಸಿದ್ಧಿ ಪಡೆದಿರುವ ಹಾಗೂ ಈ ಹಿಂದೆ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿರುವ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಉತ್ಸವ ಸುಸುತ್ರವಾಗಿ ನಡೆದು ಯಶಸ್ಸು ಕಾಣಲಿ ಎಂದು ಹಾರೈಸಿದರು.
ಕೊಡಗು ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಕೊಡವ ಕುಟುಂಬದವರು ಸೇನೆ ಕ್ರೀಡೆ ಹಾಗೂ ಎಲ್ಲಾ ಕ್ಷೇತ್ರಗಳಲ್ಲೂ ಪ್ರಪಂಚದಾದ್ಯಂತ ಉತ್ತಮ ಹೆಸರುಗಳಿಸಿದ್ದು, ಈ ಕೌಟುಂಬಿಕ ಪಂದ್ಯಾವಳಿಯು ಜಗತ್ತಿಗೆ ಮತ್ತಷ್ಟು ಹಾಕಿ ಪ್ರತಿಭೆಗಳನ್ನು ನೀಡುವಂತಾಗಲಿ ಎಂದು ಹಾರೈಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಚೆಪ್ಪುಡೀರ ಅರುಣ್ ಮಾಚಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಪಟ್ಟೆದರ್ ಬಿ ಬೋಪಣ್ಣ, ಚೇಂನಂಡ ಹಾಕಿ ನಮ್ಮೆರ ಅಧ್ಯಕ್ಷರು ಪಿ ಕರುಂಬಯ್ಯ, ಕಾರ್ಯಾಧ್ಯಕ್ಷರಾದ ಡೀನಾ ಚೆಂಗಪ್ಪ, ಸದಸ್ಯರು, ನಿರ್ದೇಶಕರು ಹಾಗೂ ಆಡಳಿತ ಮಂಡಳಿ,ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷರು ಪಾಂಡಾಂಡ ಬೋಪಣ್ಣ, ಒಲಂಪಿಯನ್ ಪೂಣಚ್ಚ, ನಿರ್ದೇಶಕರು ಕಲಿಯಂಡ ಸಂಪನ್ ಅಯ್ಯಪ್ಪ, ಬಾಚಮಾಂಡ ಲವ ಚಿಣ್ಣಪ್ಪ, ಕುಶಾಲಪ್ಪ, ಅಜ್ಜಿಕುಟ್ಟಿರ ಪೊನ್ನು, ಮುತ್ತಪ್ಪ, ದಯಾ ಚಿಣ್ಣಪ್ಪ, ಮಿಥುನ್ ಮಾಚಯ್ಯ, ಸೂರಜ್ ಹೊಸೂರು,ಕುಂಡಚ್ಚಿರ ಮಂಜು ದೇವಯ್ಯ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು