9:52 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೊಂತಿ ಹಬ್ಬ: ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಸಂದೇಶ

07/09/2025, 20:12

ಮಂಗಳೂರು(reporterkarnataka.com): ಮೊಂತಿ ಹಬ್ಬದ ಪ್ರಯುಕ್ತ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ನಾಡಿನ ಜನತೆಗೆ ಸಂದೇಶ ನೀಡಿದ್ದಾರೆ.
ಸಪ್ಟೆಂಬರ್ 8 ಮೇರಿ ಮಾತೆಯ ಜನನದ ಹಬ್ಬದ ದಿನವಾಗಿದೆ. ಇದು ನಮ್ಮ ಮಾತೆಯ ದಿನ. ನಮಗೆ ಸಂತಸ,ಸಡಗರ, ಸಂಭ್ರಮದ ದಿನ. ಈ ದಿನದಂದು ಪುಟಾಣಿ ಮಕ್ಕಳು ಹೂವುಗಳನ್ನು ತಂದು, ನಾವು ನಮ್ಮ ಹೊಲ ಗದ್ದೆಗಳಲ್ಲಿ ಬೆಳೆದ ಬೆಳೆಯನ್ನು ತಂದು ದೇವರಿಗೆ ಅರ್ಪಿಸುವಾಗ ದೇವರು ನಮಗೆ ನೀಡಿದ ಹೊಸ ಬೆಳೆ ಮತ್ತು ನಮ್ಮ ಮನೆಗಳಲ್ಲಿ ಇರುವ ಹೆಣ್ಮಕ್ಕಳು ಹಾಗೂ ಮಹಿಳೆಯರು ನಿಜವಾಗಿಯೂ ನಮ್ಮ ಕುಟುಂಬದ ಭಂಡಾರ.
ಹೊಸ ಬೆಳೆ, ಮೇರಿ ಮಾತೆಯ ಜನ್ಮ ದಿನ ಹಾಗೂ ನಮ್ಮ ಕುಟುಂಬದ ಹೆಣ್ಮಕ್ಕಳು- ಈ ಮೂವರ ಆರೈಕೆ ಮಾಡಲು ದೇವರು ನಮಗೆ ವಿಶೇಷ ಆಹ್ವಾನ ನೀಡಿದ್ದಾರೆ. ಈ ಆಹ್ವಾನಕ್ಕೆ ಓಗೊಟ್ಟು ಮೇರಿ ಮಾತೆಯ ಜನ್ಮ ದಿನ ಆಚರಿಸುವ ಸಂದರ್ಭ ಮಾತೆಗೆ ನೀಡುವ ಗೌರವ ಮರಳಿ ನಮಗೆ ಲಭಿಸುತ್ತದೆ.
ಈ ಹಬ್ಬದ ಜತೆಗೆ ಕ್ಯಾಥೋಲಿಕ್ ಧರ್ಮ ಸಭೆಯು ಇನ್ನೊಂದು ವಿಶೇಷ ಹಬ್ಬವನ್ನು ಆಚರಿಸುತ್ತಿದೆ. ಸಪ್ಟೆಂಬರ್ 1 ರಿಂದ ಅಕ್ಟೋಬರ್ 4 ರ ವರೆಗೆ ಸಂತ ಫ್ರಾನ್ಸಿಸ್ ಆಸಿಸಿ ಅವರ ಹಬ್ಬದ ತನಕದ ಕಾಲವನ್ನು ಸೃಷ್ಟಿಯ ಕಾಲ ಎಂದು ಆಚರಿಸಲಾಗುತ್ತದೆ. ಈ ಸೃಷ್ಟಿಯ ಕಾಲದ ಆಚರಣೆಯ ಸಂದರ್ಭದಲ್ಲಿಯೇ ಮೇರಿ ಮಾತೆಯ ಜನ್ಮ ದಿನಾಚರಣೆ ಕೂಡಾ ಬರುವುದರಿಂದ ನಮ್ಮ ಮಂಗಳೂರಿನ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಹೊಸ ಬೆಳೆಗೆ, ಹೆಣ್ಮಕ್ಕಳಿಗೆ ಹಾಗೂ ಕುಟುಂಬದ ಏಕತೆಗೆ ಗಮನ ಹರಿಸುವುದರಿಂದ ನಮ್ಮ ಸಂಭ್ರಮ ಎರಡು ಪಟ್ಟಾಗುತ್ತದೆ.


ಈ ಹಬ್ಬದ ಸಂದರ್ಭ ವಿಶೇಷವಾಗಿ ಸಮಗ್ರ ಸೃಷ್ಟಿಯ ಸಂರಕ್ಷಣೆ ಮಾಡಲು, ಪ್ರಾರ್ಥನೆ ಸಲ್ಲಿಸಲು, ಬಲಿ ಪೂಜೆಯನ್ನು ಅರ್ಪಿಸಲು ಕ್ರೈಸ್ತ ಧರ್ಮ ಸಭೆ ಕರೆ ನೀಡಿರುವುದರಿಂದ ನಾವು ಪ್ರಾರ್ಥನೆಯ ಮೂಲಕ ಹಾಗೂ ನಮ್ಮ ಸೃಷ್ಟಿಯ ಸಂರಕ್ಷಣೆಯ ಮೂಲಕ ಪರಸ್ಪರರ ಸೇವೆ ಮಾಡಲು , ಗೌರವಿಸಲು , ಪ್ರೀತಿಯಿಂದ ಸೃಷ್ಟಿಯನ್ನು ಉಳಿಸಲು ಹಾಗೂ ಇನ್ನಷ್ಟು ಅಧಿಕ ಪ್ರಮಾಣದಲ್ಲಿ ಅದರ ಆರೈಕೆ ಮಾಡಲು ದೇವರು ನಮಗೆ ಅನುಗ್ರಹಿಸಲಿ. ಸೃಷ್ಟಿಯನ್ನು ಉಳಿಸೋಣ ಹಾಗೂ ಈ ಸೃಷ್ಟಿಯನ್ನು ಪ್ರೀತಿಸೋಣ ಮತ್ತು ಈ ಸೃಷ್ಟಿಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ.

– ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ
ಧರ್ಮಾಧ್ಯಕ್ಷರು,
ಮಂಗಳೂರು ಧರ್ಮ ಪ್ರಾಂತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು