7:21 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ…

ಇತ್ತೀಚಿನ ಸುದ್ದಿ

ಮೊಂತಿ ಹಬ್ಬ: ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಎಲ್ಲ ಚರ್ಚ್ ಗಳಲ್ಲಿ ನವದಿನಗಳ ನೊವೆನಾಗಳಿಗೆ ಚಾಲನೆ

31/08/2025, 14:54

ಮಂಗಳೂರು(reporterkarnataka.com): ಮೊಂತಿಹಬ್ಬ(ಕನ್ಯಾ ಮರಿಯಮ್ಮ ಹಬ್ಬ)ದ ಅಂಗವಾಗಿ ನವದಿನಗಳ ಪ್ರಾರ್ಥನಾ ವಿಧಿಗಳಿಗೆ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಎಲ್ಲ ಚರ್ಚ್ ಗಳಲ್ಲಿ ಶನಿವಾರ ಚಾಲನೆ ನೀಡಲಾಯಿತು.


ನವ ದಿನಗಳ ಪ್ರಾರ್ಥನಾವಿಧಿ ಮುಗಿದ ಬಳಿಕ ಸೆ.8ರಂದು ಮೊಂತಿ ಹಬ್ಬ( ಕುರಲ್ ಪರ್ಬ)ವನ್ನು ಕ್ರೈಸ್ತ ಸಮುದಾಯದವರು ಆಚರಣೆ ಮಾಡಲಿದ್ದಾರೆ. ಈ ನವ ದಿನಗಳ ನೊವೆನಾ ಸಮಯದಲ್ಲಿ ಪುಟಾಣಿ ಮಕ್ಕಳು ಕನ್ಯಾ ಮರಿಯಮ್ಮ ರಿಗೆ ಪುಷ್ಪ ಅರ್ಪಣೆ ಮಾಡುವ ಮೂಲಕ ಪ್ರಕೃತಿಯ ಆರಾಧನೆಗೆ ಸಾಕ್ಷಿಯಾದರು.
ನಗರದ ಉರ್ವ ಚರ್ಚಿನಲ್ಲಿ ಜಪಮಾಲೆಯ ಬಳಿಕ ನಡೆದ ಕೃತಜ್ಞತಾ ಪೂಜೆಯಲ್ಲಿ ಚರ್ಚಿನ ಧರ್ಮಗುರು ಫಾ. ಮೈಕಲ್ ಲೋಬೋ ಪ್ರವಚನ ನೀಡಿ, ದೇವರು ಭಕ್ತರಲ್ಲಿ ವಿಧೇಯತೆಯನ್ನು ಬಯಸುತ್ತಾನೆ. ಹೊರಗಿನ ಆಡಂಬರಕ್ಕಂತ ಹೆಚ್ಚಾಗಿ ಹೃದಯದಲ್ಲಿರುವ ಭಕ್ತಿಯನ್ನು ಬಯಸುತ್ತಾನೆ. ಮಹಾತ್ಮಗಾಂಧೀಜಿ, ಮದರ್ ತೆರೇಸಾ, ಸಂತ ಫ್ರಾನ್ಸಿಸ್ ಅಸೀಸಿಯಂತಹ ಮಹಾನ್ ಪುರುಷರು ಇಂದಿಗೂ ಸಮಾಜಕ್ಕೆ ಮಾದರಿಯಾಗಿರುವುದು ಅವರಲ್ಲಿ ತುಂಬಿರುವ ವಿಧೇಯತೆಯಿಂದ ಭಕ್ತರು ಕೂಡ ಇತರರನ್ನು ಗೌರವಿಸುವ ವಿಧೇಯತೆ ತೋರುವ ಕರ‍್ಯದಿಂದ ದೇವರು ಸಂತೃಪ್ತನಾಗುತ್ತಾನೆ ಎಂದರು. ಈ ಸಂದರ್ಭ ಫಾ. ಮೌರಿಸ್ ಕೃತಜ್ಞತಾ ಪೂಜೆಯಲ್ಲಿ ಉಪಸ್ಥಿತರಿದ್ದರು. ಈ ಬಳಿಕ ಉರ್ವ ಚರ್ಚಿನ ಪ್ರಧಾನ ಧರ್ಮಗುರು ಫಾ.ಬೆಂಜಮಿನ್ ಪಿಂಟೋ ನೊವೆನಾ ಪ್ರಾರ್ಥನಾವಿಧಿಯನ್ನು ನಡೆಸಿಕೊಟ್ಟರು. ಕನ್ಯಾ ಮರಿಯಮ್ಮಳಿಗೆ ಪುಷ್ಪ ಅರ್ಪಣೆ ಮಾಡಿದ ಮಕ್ಕಳಿಗೆ ಹಾಗೂ ಹಿರಿಯರಿಗೆ ಸಿಹಿತಿಂಡಿ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು