2:05 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮೊಂತಿ ಹಬ್ಬ: ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಎಲ್ಲ ಚರ್ಚ್ ಗಳಲ್ಲಿ ನವದಿನಗಳ ನೊವೆನಾಗಳಿಗೆ ಚಾಲನೆ

31/08/2025, 14:54

ಮಂಗಳೂರು(reporterkarnataka.com): ಮೊಂತಿಹಬ್ಬ(ಕನ್ಯಾ ಮರಿಯಮ್ಮ ಹಬ್ಬ)ದ ಅಂಗವಾಗಿ ನವದಿನಗಳ ಪ್ರಾರ್ಥನಾ ವಿಧಿಗಳಿಗೆ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಎಲ್ಲ ಚರ್ಚ್ ಗಳಲ್ಲಿ ಶನಿವಾರ ಚಾಲನೆ ನೀಡಲಾಯಿತು.


ನವ ದಿನಗಳ ಪ್ರಾರ್ಥನಾವಿಧಿ ಮುಗಿದ ಬಳಿಕ ಸೆ.8ರಂದು ಮೊಂತಿ ಹಬ್ಬ( ಕುರಲ್ ಪರ್ಬ)ವನ್ನು ಕ್ರೈಸ್ತ ಸಮುದಾಯದವರು ಆಚರಣೆ ಮಾಡಲಿದ್ದಾರೆ. ಈ ನವ ದಿನಗಳ ನೊವೆನಾ ಸಮಯದಲ್ಲಿ ಪುಟಾಣಿ ಮಕ್ಕಳು ಕನ್ಯಾ ಮರಿಯಮ್ಮ ರಿಗೆ ಪುಷ್ಪ ಅರ್ಪಣೆ ಮಾಡುವ ಮೂಲಕ ಪ್ರಕೃತಿಯ ಆರಾಧನೆಗೆ ಸಾಕ್ಷಿಯಾದರು.
ನಗರದ ಉರ್ವ ಚರ್ಚಿನಲ್ಲಿ ಜಪಮಾಲೆಯ ಬಳಿಕ ನಡೆದ ಕೃತಜ್ಞತಾ ಪೂಜೆಯಲ್ಲಿ ಚರ್ಚಿನ ಧರ್ಮಗುರು ಫಾ. ಮೈಕಲ್ ಲೋಬೋ ಪ್ರವಚನ ನೀಡಿ, ದೇವರು ಭಕ್ತರಲ್ಲಿ ವಿಧೇಯತೆಯನ್ನು ಬಯಸುತ್ತಾನೆ. ಹೊರಗಿನ ಆಡಂಬರಕ್ಕಂತ ಹೆಚ್ಚಾಗಿ ಹೃದಯದಲ್ಲಿರುವ ಭಕ್ತಿಯನ್ನು ಬಯಸುತ್ತಾನೆ. ಮಹಾತ್ಮಗಾಂಧೀಜಿ, ಮದರ್ ತೆರೇಸಾ, ಸಂತ ಫ್ರಾನ್ಸಿಸ್ ಅಸೀಸಿಯಂತಹ ಮಹಾನ್ ಪುರುಷರು ಇಂದಿಗೂ ಸಮಾಜಕ್ಕೆ ಮಾದರಿಯಾಗಿರುವುದು ಅವರಲ್ಲಿ ತುಂಬಿರುವ ವಿಧೇಯತೆಯಿಂದ ಭಕ್ತರು ಕೂಡ ಇತರರನ್ನು ಗೌರವಿಸುವ ವಿಧೇಯತೆ ತೋರುವ ಕರ‍್ಯದಿಂದ ದೇವರು ಸಂತೃಪ್ತನಾಗುತ್ತಾನೆ ಎಂದರು. ಈ ಸಂದರ್ಭ ಫಾ. ಮೌರಿಸ್ ಕೃತಜ್ಞತಾ ಪೂಜೆಯಲ್ಲಿ ಉಪಸ್ಥಿತರಿದ್ದರು. ಈ ಬಳಿಕ ಉರ್ವ ಚರ್ಚಿನ ಪ್ರಧಾನ ಧರ್ಮಗುರು ಫಾ.ಬೆಂಜಮಿನ್ ಪಿಂಟೋ ನೊವೆನಾ ಪ್ರಾರ್ಥನಾವಿಧಿಯನ್ನು ನಡೆಸಿಕೊಟ್ಟರು. ಕನ್ಯಾ ಮರಿಯಮ್ಮಳಿಗೆ ಪುಷ್ಪ ಅರ್ಪಣೆ ಮಾಡಿದ ಮಕ್ಕಳಿಗೆ ಹಾಗೂ ಹಿರಿಯರಿಗೆ ಸಿಹಿತಿಂಡಿ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು