9:03 AM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಮುಡಾ ಹಗರಣದ ರೀತಿಯಲ್ಲೇ ವಕ್ಫ್ ಹಗರಣ ಬಯಲಿಗೆಳೆಯುತ್ತೇವೆ: ಬಿಜೆಪಿ ಮಾಜಿ ಶಾಸಕ ಹರ್ಷವರ್ಧನ್

02/11/2024, 16:21

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮುಡಾ ಹಗರಣದ ರೀತಿಯಲ್ಲಿಯೇ ವಕ್ಫ್ ಹಗರಣವನ್ನು ಬಯಲಿಗೆಳೆಯುವ ಉದ್ದೇಶದಿಂದ ಇಡೀ ರಾಜ್ಯಾದ್ಯಂತ ನವೆಂಬರ್ 4ರಂದು ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹರ್ಷವರ್ಧನ್ ಹೇಳಿದರು.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ತಲತಲಾಂತರ ದಿಂದ ಕೆಲವು ರೈತರು ಉಳುಮೆ ಮಾಡಿಕೊಂಡು ಬರುತ್ತಿರುವ ಜಮೀನುಗಳನ್ನು ಹಾಗೂ ದೇವಾಲಯ ಮತ್ತು ಮಠಮಾನ್ಯಗಳಿಗೆ ಸೇರಿದ ಸಾವಿರಾರು ಎಕರೆ ಜಮೀನುಗಳಿಗೂ ಸಹ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದರು.
ಇದೊಂದು ಅಲ್ಪಸಂಖ್ಯಾತರನ್ನು ಓಲೈಸುವ ಆತಂಕಕಾರಿ ಬೆಳವಣಿಗೆಯಾಗಿದೆ. ಹಾಗಂತ ನಾವು ಅಲ್ಪಸಂಖ್ಯಾತರ ವಿರೋಧಿಯಲ್ಲ. ಆದರೆ ಇದರಿಂದ ನಮ್ಮ ರೈತರಿಗೆ ಅನ್ಯಾಯವಾಗುತ್ತಿರುವುದನ್ನು ನಾವು ಸಹಿಸುವುದಿಲ್ಲ. ವಕ್ಫ್ ಹೆಸರಿನಲ್ಲಿ ರೈತರನ್ನು ಒಕ್ಕಲೆ ಬ್ಬಿಸುವುದಕ್ಕೆ ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದರು.
ರೈತ ಬಾಂಧವರು ಯಾರು ವಿಚಲಿತರಾಗದೆ ಅಂತಹ ಅನ್ಯಾಯಕ್ಕೆ ಒಳಗಾದ ರೈತರು ನಮ್ಮ ಬಳಿ ಬನ್ನಿ. ಇದರ ವಿರುದ್ಧ ಹೋರಾಟ ಮಾಡುವುದಾಗಿ ರೈತ ಬಾಂಧವರಿಗೆ ಕರೆ ನೀಡಿದರು.
ನಮ್ಮ ಪಕ್ಷ ಸಿಎಂ ಮೂಡಾ ಹಗರಣವನ್ನು ಬಯಲಿಗೆಳೆದ ಕಾರಣ ಇಂದು ಸಿಎಂ ಕುರ್ಚಿ ಅಲುಗಾಡುತ್ತಿದೆ. ಉಪ ಚುನಾವಣೆ ಮುಗಿದ ಬಳಿಕ ಸಿಎಂ ರಾಜೀನಾಮೆಯನ್ನೂ ನೀಡುತ್ತಾರೆ ಎಂದು ತಿಳಿಸುತ್ತಾ ಅದೇ ರೀತಿ ವಕ್ಫ್ ಹಗರಣವನ್ನು ಬಯಲಿ ಗೆಳೆಯಲಾಗುತ್ತದೆ ಎಂದರು.

ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಕೆಂಡಗಣ್ಣಪ್ಪ ಹಾಗೂ ರೈತ ಮೋರ್ಚ ಅಧ್ಯಕ್ಷ ಮಹೇಶ್ ಬಾಬು ಮಾತನಾಡಿ, ಘಟನೆಯ ಬಗ್ಗೆ ವಿವರಿಸಿದರು.
ಗೋಷ್ಠಿಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಿದ್ದರಾಜು, ನಗರಸಭಾ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಮುಖಂಡರುಗಳಾದ ಶ್ರೀನಿವಾಸ ರೆಡ್ಡಿ, ಪುಟ್ಟಸ್ವಾಮಿ, ಸಿದ್ದರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು