2:43 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮುಡಾ ಹಗರಣದ ರೀತಿಯಲ್ಲೇ ವಕ್ಫ್ ಹಗರಣ ಬಯಲಿಗೆಳೆಯುತ್ತೇವೆ: ಬಿಜೆಪಿ ಮಾಜಿ ಶಾಸಕ ಹರ್ಷವರ್ಧನ್

02/11/2024, 16:21

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮುಡಾ ಹಗರಣದ ರೀತಿಯಲ್ಲಿಯೇ ವಕ್ಫ್ ಹಗರಣವನ್ನು ಬಯಲಿಗೆಳೆಯುವ ಉದ್ದೇಶದಿಂದ ಇಡೀ ರಾಜ್ಯಾದ್ಯಂತ ನವೆಂಬರ್ 4ರಂದು ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹರ್ಷವರ್ಧನ್ ಹೇಳಿದರು.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ತಲತಲಾಂತರ ದಿಂದ ಕೆಲವು ರೈತರು ಉಳುಮೆ ಮಾಡಿಕೊಂಡು ಬರುತ್ತಿರುವ ಜಮೀನುಗಳನ್ನು ಹಾಗೂ ದೇವಾಲಯ ಮತ್ತು ಮಠಮಾನ್ಯಗಳಿಗೆ ಸೇರಿದ ಸಾವಿರಾರು ಎಕರೆ ಜಮೀನುಗಳಿಗೂ ಸಹ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದರು.
ಇದೊಂದು ಅಲ್ಪಸಂಖ್ಯಾತರನ್ನು ಓಲೈಸುವ ಆತಂಕಕಾರಿ ಬೆಳವಣಿಗೆಯಾಗಿದೆ. ಹಾಗಂತ ನಾವು ಅಲ್ಪಸಂಖ್ಯಾತರ ವಿರೋಧಿಯಲ್ಲ. ಆದರೆ ಇದರಿಂದ ನಮ್ಮ ರೈತರಿಗೆ ಅನ್ಯಾಯವಾಗುತ್ತಿರುವುದನ್ನು ನಾವು ಸಹಿಸುವುದಿಲ್ಲ. ವಕ್ಫ್ ಹೆಸರಿನಲ್ಲಿ ರೈತರನ್ನು ಒಕ್ಕಲೆ ಬ್ಬಿಸುವುದಕ್ಕೆ ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದರು.
ರೈತ ಬಾಂಧವರು ಯಾರು ವಿಚಲಿತರಾಗದೆ ಅಂತಹ ಅನ್ಯಾಯಕ್ಕೆ ಒಳಗಾದ ರೈತರು ನಮ್ಮ ಬಳಿ ಬನ್ನಿ. ಇದರ ವಿರುದ್ಧ ಹೋರಾಟ ಮಾಡುವುದಾಗಿ ರೈತ ಬಾಂಧವರಿಗೆ ಕರೆ ನೀಡಿದರು.
ನಮ್ಮ ಪಕ್ಷ ಸಿಎಂ ಮೂಡಾ ಹಗರಣವನ್ನು ಬಯಲಿಗೆಳೆದ ಕಾರಣ ಇಂದು ಸಿಎಂ ಕುರ್ಚಿ ಅಲುಗಾಡುತ್ತಿದೆ. ಉಪ ಚುನಾವಣೆ ಮುಗಿದ ಬಳಿಕ ಸಿಎಂ ರಾಜೀನಾಮೆಯನ್ನೂ ನೀಡುತ್ತಾರೆ ಎಂದು ತಿಳಿಸುತ್ತಾ ಅದೇ ರೀತಿ ವಕ್ಫ್ ಹಗರಣವನ್ನು ಬಯಲಿ ಗೆಳೆಯಲಾಗುತ್ತದೆ ಎಂದರು.

ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಕೆಂಡಗಣ್ಣಪ್ಪ ಹಾಗೂ ರೈತ ಮೋರ್ಚ ಅಧ್ಯಕ್ಷ ಮಹೇಶ್ ಬಾಬು ಮಾತನಾಡಿ, ಘಟನೆಯ ಬಗ್ಗೆ ವಿವರಿಸಿದರು.
ಗೋಷ್ಠಿಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಿದ್ದರಾಜು, ನಗರಸಭಾ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಮುಖಂಡರುಗಳಾದ ಶ್ರೀನಿವಾಸ ರೆಡ್ಡಿ, ಪುಟ್ಟಸ್ವಾಮಿ, ಸಿದ್ದರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು