1:47 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

20/01/2025, 19:52

ಬೆಂಗಳೂರು(reporterkarnataka.com): ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು.
*ಹಣ ದುರುಪಯೋಗದ ಪ್ರಶ್ನೆ ಇಲ್ಲ:* ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
*ತಪ್ಪಿತಸ್ಥರ ವಿರುದ್ಧ ಕ್ರಮ:*
ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು ಎಂದರು.

*ಮೈಕ್ರೋ ಫೈನಾನ್ಸ್ ದಂಧೆ- ಕಾನೂನು ರೀತ್ಯ ಕ್ರಮ:*
ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು