1:12 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

20/01/2025, 19:52

ಬೆಂಗಳೂರು(reporterkarnataka.com): ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು.
*ಹಣ ದುರುಪಯೋಗದ ಪ್ರಶ್ನೆ ಇಲ್ಲ:* ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
*ತಪ್ಪಿತಸ್ಥರ ವಿರುದ್ಧ ಕ್ರಮ:*
ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು ಎಂದರು.

*ಮೈಕ್ರೋ ಫೈನಾನ್ಸ್ ದಂಧೆ- ಕಾನೂನು ರೀತ್ಯ ಕ್ರಮ:*
ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು