2:31 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

20/01/2025, 19:52

ಬೆಂಗಳೂರು(reporterkarnataka.com): ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು.
*ಹಣ ದುರುಪಯೋಗದ ಪ್ರಶ್ನೆ ಇಲ್ಲ:* ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
*ತಪ್ಪಿತಸ್ಥರ ವಿರುದ್ಧ ಕ್ರಮ:*
ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು ಎಂದರು.

*ಮೈಕ್ರೋ ಫೈನಾನ್ಸ್ ದಂಧೆ- ಕಾನೂನು ರೀತ್ಯ ಕ್ರಮ:*
ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು