10:23 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ಮೂಡುಬಿದರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನ: ಮಂಗಳೂರು ಆಸ್ಪತ್ರೆಗೆ ದಾಖಲು

14/09/2021, 17:07

ಮೂಡುಬಿದರೆ(reporterkarnataka.com): ಆಳ್ವಾಸ್ ಕಾಲೇಜಿನ ಪಿಯು ವಿದ್ಯಾರ್ಥಿಯೊಬ್ಬ ಸೋಮವಾರ ರಾತ್ರಿ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿಯನ್ನು ಬೆಳಗಾವಿ ಮೂಲದ ರಜತ್(18) ಎಂದು ಗುರುತಿಸಲಾಗಿದೆ.

ಆಳ್ವಾಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಾ ಹಾಸ್ಟೆಲ್ ನಲ್ಲಿ ಇದ್ದುಕೊಂಡು ಓದುತ್ತಿದ್ದ. ಸೋಮವಾರ ಮಧ್ಯಾಹ್ನ ಮನೆಯವರಿಗೆ ಫೋನ್ ಮಾಡಿದ್ದು, ಯಾವುದೇ ರೀತಿಯಲ್ಲಿ ಅಸಹನೆ, ನೋವನ್ನು ವ್ಯಕ್ತಪಡಿಸಿರಲಿಲ್ಲ ಎನ್ನಲಾಗಿದೆ. ಆದರೆ, ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದ 5ನೇ ಮಹಡಿಯಿಂದ ಕೆಳಕ್ಕೆ ಹಾರಿದ್ದು, ಘಟನೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ.

ಕೂಡಲೇ ಅಲ್ಲಿನ ಹಾಸ್ಟೆಲ್ ಸಿಬಂದಿ ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಮೂಡುಬಿದ್ರೆ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿ ಕೋಮಾ ಸ್ಥಿತಿಯಲ್ಲಿದ್ದು, ಆತನಿಂದಲೇ ಮಾಹಿತಿ ಪಡೆಯಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು