5:03 PM Friday4 - July 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಮೂಡುಬಿದರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನ: ಮಂಗಳೂರು ಆಸ್ಪತ್ರೆಗೆ ದಾಖಲು

14/09/2021, 17:07

ಮೂಡುಬಿದರೆ(reporterkarnataka.com): ಆಳ್ವಾಸ್ ಕಾಲೇಜಿನ ಪಿಯು ವಿದ್ಯಾರ್ಥಿಯೊಬ್ಬ ಸೋಮವಾರ ರಾತ್ರಿ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿಯನ್ನು ಬೆಳಗಾವಿ ಮೂಲದ ರಜತ್(18) ಎಂದು ಗುರುತಿಸಲಾಗಿದೆ.

ಆಳ್ವಾಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಾ ಹಾಸ್ಟೆಲ್ ನಲ್ಲಿ ಇದ್ದುಕೊಂಡು ಓದುತ್ತಿದ್ದ. ಸೋಮವಾರ ಮಧ್ಯಾಹ್ನ ಮನೆಯವರಿಗೆ ಫೋನ್ ಮಾಡಿದ್ದು, ಯಾವುದೇ ರೀತಿಯಲ್ಲಿ ಅಸಹನೆ, ನೋವನ್ನು ವ್ಯಕ್ತಪಡಿಸಿರಲಿಲ್ಲ ಎನ್ನಲಾಗಿದೆ. ಆದರೆ, ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದ 5ನೇ ಮಹಡಿಯಿಂದ ಕೆಳಕ್ಕೆ ಹಾರಿದ್ದು, ಘಟನೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ.

ಕೂಡಲೇ ಅಲ್ಲಿನ ಹಾಸ್ಟೆಲ್ ಸಿಬಂದಿ ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಮೂಡುಬಿದ್ರೆ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿ ಕೋಮಾ ಸ್ಥಿತಿಯಲ್ಲಿದ್ದು, ಆತನಿಂದಲೇ ಮಾಹಿತಿ ಪಡೆಯಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು