9:31 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೂಡುಬಿದರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನ: ಮಂಗಳೂರು ಆಸ್ಪತ್ರೆಗೆ ದಾಖಲು

14/09/2021, 17:07

ಮೂಡುಬಿದರೆ(reporterkarnataka.com): ಆಳ್ವಾಸ್ ಕಾಲೇಜಿನ ಪಿಯು ವಿದ್ಯಾರ್ಥಿಯೊಬ್ಬ ಸೋಮವಾರ ರಾತ್ರಿ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿಯನ್ನು ಬೆಳಗಾವಿ ಮೂಲದ ರಜತ್(18) ಎಂದು ಗುರುತಿಸಲಾಗಿದೆ.

ಆಳ್ವಾಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಾ ಹಾಸ್ಟೆಲ್ ನಲ್ಲಿ ಇದ್ದುಕೊಂಡು ಓದುತ್ತಿದ್ದ. ಸೋಮವಾರ ಮಧ್ಯಾಹ್ನ ಮನೆಯವರಿಗೆ ಫೋನ್ ಮಾಡಿದ್ದು, ಯಾವುದೇ ರೀತಿಯಲ್ಲಿ ಅಸಹನೆ, ನೋವನ್ನು ವ್ಯಕ್ತಪಡಿಸಿರಲಿಲ್ಲ ಎನ್ನಲಾಗಿದೆ. ಆದರೆ, ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದ 5ನೇ ಮಹಡಿಯಿಂದ ಕೆಳಕ್ಕೆ ಹಾರಿದ್ದು, ಘಟನೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ.

ಕೂಡಲೇ ಅಲ್ಲಿನ ಹಾಸ್ಟೆಲ್ ಸಿಬಂದಿ ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಮೂಡುಬಿದ್ರೆ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿ ಕೋಮಾ ಸ್ಥಿತಿಯಲ್ಲಿದ್ದು, ಆತನಿಂದಲೇ ಮಾಹಿತಿ ಪಡೆಯಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು