7:51 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮೂಡಬಿದ್ರೆ: ಅಕ್ರಮ ಜಾನುವಾರ ಸಾಗಾಟ; ಇಬ್ಬರ ಬಂಧನ; ಕಾರು ವಶ

15/05/2026, 20:07

ಮೂಡಬಿದ್ರೆ(reporterkarnataka.com): ಮಾರುತಿ ಬ್ರೀಜಾ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮೂಡಬಿದ್ರೆ ಪೊಲೀಸರು ಮೂಡಬಿದ್ರೆ ಸಮೀಪದ ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಎಂಬಲ್ಲಿ ಬಂಧಿಸಿದ್ದಾರೆ.
ಮೇ 14ರಂದು ಬೆಳ್ಳಿಗ್ಗೆ 7.00 ಗಂಟೆಗೆ ಪಿಎಸ್ ಐ ಕೃಷ್ಣಪ್ಪ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಬೆಳುವಾಯಿ ಕಡೆಯಿಂದ ಮಾರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಜಾ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಿಕೊಂಡು ಹೋಗುತ್ತಿದ್ದಾರೆ ಎಂಬ ಮಾಹಿತಿಯಂತೆ ಸಿಬ್ಬಂದಿಗಳೊಂದಿಗೆ ಮೂಡಬಿದ್ರೆ ತಾಲೂಕು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ತಲುಪಿ ವಾಹನ ತಪಾಸಣೆ ಮಾಡುತ್ತಿರುವ ಬೆಳುವಾಯಿ ಕಡೆಯಿಂದ ಬೂದು KA19MK4265 ನೇ ಬಣ್ಣದ ಮಾರುತಿ ಬ್ರೀಜಾ ಕಾರು ಬಂದಿದ್ದು, ನಿಲ್ಲಿಸಲು ಸೂಚನೇ ನೀಡಿದಾಗ ನಿಲ್ಲಿಸದೇ ಮುಂದಕ್ಕೆ ಚಲಾಯಿಸಿಕೊಂಡು ಹೋಗಿರುತ್ತಾರೆ. ನಂತರ ಆ ವಾಹನವನ್ನು ಬೆನ್ನಟ್ಟಿದಾಗ ಸ್ವಲ್ಪ ಮುಂದಕ್ಕೆ ಗುಂಡುಕಲ್ಲು 5 ಸೈಂಟ್ಸ್ ರಸ್ತೆಗೆ ತಿರುಗಿ ಸಾಹುಲ್ ಹಮೀದ್ ಎಂಬುವರ ಮನೆ ಕಂಪೌಂಡ್ ಒಳಭಾಗದಲ್ಲಿ ಬ್ರೀಜಾ ಕಾರನ್ನು ನಿಲ್ಲಿಸಿ ವಾಹನದಲ್ಲಿದ್ದ ಚಾಲಕ ಮೂಡಬಿದ್ರೆ ಠಾಣಾ ಎಂ.ಓ.ಬಿ ಆಗಿರುವ ಹಂಡೇಲಿನ ಮಹಮ್ಮದ್ ಆರೀಪ್ ಮತ್ತು ಆತನ ಸಹಚರ ಗಂಟಾಲಕಟ್ಟೆಯ ಇಮ್ರಾನ್ ಅಲಿಯಾಸ್ ಇಬ್ರಾಹಿಂ ಕಾರಿನಿಂದ ಇಳಿದು ಓಡಿಹೋಗುತ್ತಿದ್ದವರನ್ನು ಸಿಬ್ಬಂದಿಗಳು ಬೆನ್ನಟ್ಟಿ ಹಿಡಿದು ವಿಚಾರಿಸಿ ನಂತರ ಮಾರುತಿ ಬ್ರೀಜಾ ಕಾರನ್ನು ಪರಿಶೀಲಿಸಿದಾಗ ಕಾರಿನ ಹಿಂಬದಿ ಸೀಟ್ ನ್ನು ತೆಗೆದು ಅದರ ಮೇಲೆ ನೀಲಿ ಬಣ್ಣದ ಪ್ಲಾಸ್ಟಿಕ್ ನ್ನು ಹಾಕಿ ಅದರ ಮೇಲೆ 1 ಗಂಡು ಕರುವನ್ನು ಹಿಂಸಾತ್ಮಕವಾಗಿ ಕಾಲು ಮತ್ತು ತಲೆಯನ್ನು ಹಗ್ಗದಿಂದ ಕಟ್ಟಿ ತುಂಬಿಸಿರುವುದು ಕಂಡು ಬಂದಿರುತ್ತದೆ. ಆರೋಪಿಗಳು ಒಂದು ವಾರದಿಂದ ಬೇರೆ ಬೇರೆ ಕಡೆಗಳಿಂದ ದನಗಳನ್ನು ಕಳ್ಳತನ ಮಾಡಿಕೊಂಡು ಬಂದು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ನಿವಾಸಿ ಸಾಹುಲ್ ಹಮೀದ್ ರವರ ಮನೆಯ ಬಳಿ ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ ಅಥವಾ ದನಗಳನ್ನು ಕಡಿಯಲೆಂದು ಇತರರಿಗೆ ಮಾರಾಟ ಮಾಡುವ ಸಲುವಾಗಿ ಸಂಗ್ರಹಣೆ ಮಾಡಿರುವುದಾಗಿ ತಿಳಿಸಿರುತ್ತಾರೆ. ಆರೋಪಿಗಳು ದನವನ್ನು ಕಳ್ಳತನ ಮಾಡಿಕೊಂಡು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದರಿಂದ ದನವನ್ನು, KA19MK4265 ನೇ ಮಾರುತಿ ಬ್ರೀಜಾ ಕಾರನ್ನು ಮತ್ತು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು