4:22 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಠಾಣೆ ಇನ್ಸ್ ಪೆಕ್ಟರ್ ಅಮಾನತು

17/03/2026, 20:08

ಮಂಗಳೂರು(reporterkarnataka.com): ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಮೂಡಬಿದ್ರೆ ಠಾಣೆಯ ಇನ್ಸ್ ಪೆಕ್ಟರ್ ಸಂದೇಶ್ ಅವರನ್ನು ಅಮಾನತು ಮಾಡಲಾಗಿದೆ.

ಸಂದೇಶ್ ವಿರುದ್ಧ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿತ್ತು. ಮಹಿಳೆಯನ್ನು ಬ್ಲಾಕ್ಮೇಲ್ ಮಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದ ಇನ್ಸ್ ಪೆಕ್ಟರ್ ಸಂದೇಶ್ ಮತ್ತೊಬ್ಬ ಸಂತ್ರಸ್ತ ಮಹಿಳೆಯ ಪತಿಯನ್ನು ಪ್ರಕರಣ ವೊಂದರಲ್ಲಿ ಸಿಲುಕಿಸಿ ಆತನನ್ನು ಬಿಡುಗಡೆ ಮಾಡಲು ನನ್ನ ಜೊತೆ ಲೈಂಗಿಕವಾಗಿ ಸಹಕರಿಸಬೇಕು ಅಥವಾ 25 ಲಕ್ಷ ಕೊಡಬೇಕು ಎಂದು ಬೆದರಿಕೆ ಹಾಕಿದ್ದರು. ಲೈಂಗಿಕವಾಗಿ ಬಳಸಿಕೊಂಡಿದ್ದ ಮಹಿಳೆಯ ಅಪ್ರಾಪ್ತ ಪುತ್ರಿಯ ಮೇಲೆಯೂ ಸಂದೇಶ್ ಕಣ್ಣು ಹಾಕಿದ್ದರು ಎಂದು ಆರೋಪಿಸಲಾಗಿದೆ.
ಪ್ರಕರಣ ಬೆಳಕಿಗೆ ಬರುತ್ತಲೇ ಮಂಗಳೂರು ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅಮಾನತುಗೊಳಿಸಿ ಅದೇಶಿಸಿದ್ದಾರೆ.
ಸಂದೇಶ್ ವಿರುದ್ಧ ತನಿಖೆಗೆ ಪೊಲೀಸ್ ಇಲಾಖೆ ಆದೇಶಿಸಿದೆ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಉತ್ತರ ಎಸಿಪಿ ಶ್ರೀಕಾಂತ್ ಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೂಚನೆ ನೀಡಿದ್ದಾರೆ.
ಲೈಂಗಿಕ ಕಿರುಕುಳದ ಬಗ್ಗೆ ಇದುವರೆಗೂ ಯಾವೊಬ್ಬ ಮಹಿಳೆ ಕೂಡ ದೂರು ನೀಡಿಲ್ಲ. ಯಾರಾದರೂ ಸಂತ್ರಸ್ತೆಯರು ಇದ್ದರೆ ಈ ಬಗ್ಗೆ ದೂರು ನೀಡುವಂತೆ ಮನವಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು