10:16 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೂಡಿಗೆರೆ: ಡ್ರಾಪ್ ಕೊಡುವ ನೆಪದಲ್ಲಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ ಕಾಮುಕನ  ಬಂಧನ

08/06/2022, 07:35

ಮೂಡಿಗೆರೆ(reporterkarnataka.com): ಕಾಲೇಜಿಗೆ ಹೋಗಿ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಗೆ ಅದೇ ಊರಿನ ಪಕ್ಕದ ಗ್ರಾಮಸ್ಥ ಅತ್ಯಾಚಾರ ಮಾಡಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ವಿದ್ಯಾರ್ಥಿನಿ ಕಾಲೇಜಿನಿಂದ ಕ್ಲಾಸ್ ಮುಗಿಸಿ ಮನೆಗೆ  ಬರುವ ಸಮಯದಲ್ಲಿ ಊರಿನ ಪಕ್ಕದ ಗ್ರಾಮದ ಆರೋಪಿ  ದೇವರಾಜ್ ಹಂತೂರು ಎಂಬುವನು ನಿನ್ನನ್ನು ಊರಿಗೆ ಬಿಟ್ಟು ಹೋಗುತ್ತೇನೆಂದು  ಹೇಳಿ, ಬೈಕ್ ನಲ್ಲಿ ಕುಳಿತ ಬಳಿಕ ಅವಾಚ್ಯ ವರ್ತನೆ ಮಾಡಿದ್ದಾನೆಂದು  ಯುವತಿ ಆರೋಪಿಸಿದ್ದಾಳೆ.

ಈ ವರ್ತನೆಯನ್ನು ಕಂಡು ಆಕೆಯು  ಬೈಕಿನಿಂದ  ಇಳಿಯಲು ಪ್ರಯತ್ನಿಸಿದಾಗ  ಮೈಮೇಲೆ  ಕೈ ಹಾಕಿ ಬಲಾತ್ಕಾರ ನಡೆಸಲು ಯತ್ನಿಸಿದ್ದಾನೆ. ಈ ವಿಷಯ ಯಾರಿಗಾದರೂ ಹೇಳಿದ್ದಲ್ಲಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಯುವತಿಯು  ಠಾಣೆಯಲ್ಲಿ  ದೂರು ದಾಖಲು ಮಾಡಿದ್ದಾಳೆ. ಘಟನಾ ಸಂಬಂಧ ಆರೋಪಿಯನ್ನು ಬಂಧಿಸಿರುವ ಗೋಣಿಬೀಡು ಪಿ.ಎಸ್.ಐ ಧನಂಜಯ್ ಹಾಗೂ  ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು