8:16 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಮಲೆನಾಡಿನ ಭೋಜನ ಸವಿದ ಖ್ಯಾತ ಹಾಸ್ಯ ನಟ ಟೆನಿಸ್ ಕೃಷ್ಣ 

15/11/2021, 10:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಪ್ರಖ್ಯಾತ ಹಾಸ್ಯ ನಟ, ಕನ್ನಡದ ಹಲವು ಚಲನಚಿತ್ರಗಳಲ್ಲಿ ಅಭಿನಯಿಸಿರುವ ಟೆನಿಸ್ ಕೃಷ್ಣ ಜಿಲ್ಲೆಯ ಮೂಡಿಗೆರೆಗೆ ಭಾನುವಾರ ಭೇಟಿ ನೀಡಿದ್ದರು. 

ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಅವರು ಮೂಡಿಗೆರೆ ಮಾರ್ಗವಾಗಿ ಹಿಂತಿರುಗಿ ಬರುವಾಗ ಕಾಫಿನಾಡಿನ ಬೆಟ್ಟಗುಡ್ಡಗಳ ಪ್ರಕೃತಿ ಸೌಂದರ್ಯವನ್ನು ವೀಕ್ಷಿಸುತ್ತಾ ಬಂದರು. ಮಧ್ಯಾಹ್ನ ಮೂಡಿಗೆರೆ ಪಟ್ಟಣಕ್ಕೆ ಆಗಮಿಸಿ ಶತಮಾನದಷ್ಟು ಹಳೆಯ ಮನೆಯಲ್ಲಿ ಪ್ರಾರಂಭಿಸಲಾಗಿರುವ ಖಲೀಲ್ಸ್ ಕಿಚನ್ಸ್ ಹೊಟೇಲಿಗೆ ಭೇಟಿ ನೀಡಿ ಭೋಜನ ಸವಿದರು. ಮಲೆನಾಡು-ಕರಾವಳಿ ಭಾಗದ ವಿಶೇಷ ಖಾದ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಲೆಗೆ ಶ್ವೇತವಸ್ತ್ರ ಕಟ್ಟಿಕೊಂಡಿದ್ದ ಟೆನಿಸ್ ಕೃಷ್ಣ ವಿಶೇಷವಾಗಿ ಎಲ್ಲರ ಗಮನ ಸೆಳೆದರು.  

ಟೆನಿಸ್ ಕೃಷ್ಣ ಹಿಂದೆ ಚಿತ್ರರಂಗದ ದೊಡ್ಡ ಸ್ಟಾರ್ ನಟರಾಗಿದ್ದ ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಸಹಿತ ಹಲವಾರು ನಟರ ಜೊತೆ ಹಾಸ್ಯ ನಟನಾಗಿ ಅಭಿನಯಿಸಿ ಕನ್ನಡಿಗರಿಗೆ ಚಿರಪರಿಚಿತರಾದವರು.

ಇತ್ತೀಚಿನ ಸುದ್ದಿ

ಜಾಹೀರಾತು