10:49 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಮಲೆನಾಡಿನ ಭೋಜನ ಸವಿದ ಖ್ಯಾತ ಹಾಸ್ಯ ನಟ ಟೆನಿಸ್ ಕೃಷ್ಣ 

15/11/2021, 10:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಪ್ರಖ್ಯಾತ ಹಾಸ್ಯ ನಟ, ಕನ್ನಡದ ಹಲವು ಚಲನಚಿತ್ರಗಳಲ್ಲಿ ಅಭಿನಯಿಸಿರುವ ಟೆನಿಸ್ ಕೃಷ್ಣ ಜಿಲ್ಲೆಯ ಮೂಡಿಗೆರೆಗೆ ಭಾನುವಾರ ಭೇಟಿ ನೀಡಿದ್ದರು. 

ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಅವರು ಮೂಡಿಗೆರೆ ಮಾರ್ಗವಾಗಿ ಹಿಂತಿರುಗಿ ಬರುವಾಗ ಕಾಫಿನಾಡಿನ ಬೆಟ್ಟಗುಡ್ಡಗಳ ಪ್ರಕೃತಿ ಸೌಂದರ್ಯವನ್ನು ವೀಕ್ಷಿಸುತ್ತಾ ಬಂದರು. ಮಧ್ಯಾಹ್ನ ಮೂಡಿಗೆರೆ ಪಟ್ಟಣಕ್ಕೆ ಆಗಮಿಸಿ ಶತಮಾನದಷ್ಟು ಹಳೆಯ ಮನೆಯಲ್ಲಿ ಪ್ರಾರಂಭಿಸಲಾಗಿರುವ ಖಲೀಲ್ಸ್ ಕಿಚನ್ಸ್ ಹೊಟೇಲಿಗೆ ಭೇಟಿ ನೀಡಿ ಭೋಜನ ಸವಿದರು. ಮಲೆನಾಡು-ಕರಾವಳಿ ಭಾಗದ ವಿಶೇಷ ಖಾದ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಲೆಗೆ ಶ್ವೇತವಸ್ತ್ರ ಕಟ್ಟಿಕೊಂಡಿದ್ದ ಟೆನಿಸ್ ಕೃಷ್ಣ ವಿಶೇಷವಾಗಿ ಎಲ್ಲರ ಗಮನ ಸೆಳೆದರು.  

ಟೆನಿಸ್ ಕೃಷ್ಣ ಹಿಂದೆ ಚಿತ್ರರಂಗದ ದೊಡ್ಡ ಸ್ಟಾರ್ ನಟರಾಗಿದ್ದ ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಸಹಿತ ಹಲವಾರು ನಟರ ಜೊತೆ ಹಾಸ್ಯ ನಟನಾಗಿ ಅಭಿನಯಿಸಿ ಕನ್ನಡಿಗರಿಗೆ ಚಿರಪರಿಚಿತರಾದವರು.

ಇತ್ತೀಚಿನ ಸುದ್ದಿ

ಜಾಹೀರಾತು