2:54 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಮಲೆನಾಡಿನ ಭೋಜನ ಸವಿದ ಖ್ಯಾತ ಹಾಸ್ಯ ನಟ ಟೆನಿಸ್ ಕೃಷ್ಣ 

15/11/2021, 10:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಪ್ರಖ್ಯಾತ ಹಾಸ್ಯ ನಟ, ಕನ್ನಡದ ಹಲವು ಚಲನಚಿತ್ರಗಳಲ್ಲಿ ಅಭಿನಯಿಸಿರುವ ಟೆನಿಸ್ ಕೃಷ್ಣ ಜಿಲ್ಲೆಯ ಮೂಡಿಗೆರೆಗೆ ಭಾನುವಾರ ಭೇಟಿ ನೀಡಿದ್ದರು. 

ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಅವರು ಮೂಡಿಗೆರೆ ಮಾರ್ಗವಾಗಿ ಹಿಂತಿರುಗಿ ಬರುವಾಗ ಕಾಫಿನಾಡಿನ ಬೆಟ್ಟಗುಡ್ಡಗಳ ಪ್ರಕೃತಿ ಸೌಂದರ್ಯವನ್ನು ವೀಕ್ಷಿಸುತ್ತಾ ಬಂದರು. ಮಧ್ಯಾಹ್ನ ಮೂಡಿಗೆರೆ ಪಟ್ಟಣಕ್ಕೆ ಆಗಮಿಸಿ ಶತಮಾನದಷ್ಟು ಹಳೆಯ ಮನೆಯಲ್ಲಿ ಪ್ರಾರಂಭಿಸಲಾಗಿರುವ ಖಲೀಲ್ಸ್ ಕಿಚನ್ಸ್ ಹೊಟೇಲಿಗೆ ಭೇಟಿ ನೀಡಿ ಭೋಜನ ಸವಿದರು. ಮಲೆನಾಡು-ಕರಾವಳಿ ಭಾಗದ ವಿಶೇಷ ಖಾದ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಲೆಗೆ ಶ್ವೇತವಸ್ತ್ರ ಕಟ್ಟಿಕೊಂಡಿದ್ದ ಟೆನಿಸ್ ಕೃಷ್ಣ ವಿಶೇಷವಾಗಿ ಎಲ್ಲರ ಗಮನ ಸೆಳೆದರು.  

ಟೆನಿಸ್ ಕೃಷ್ಣ ಹಿಂದೆ ಚಿತ್ರರಂಗದ ದೊಡ್ಡ ಸ್ಟಾರ್ ನಟರಾಗಿದ್ದ ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಸಹಿತ ಹಲವಾರು ನಟರ ಜೊತೆ ಹಾಸ್ಯ ನಟನಾಗಿ ಅಭಿನಯಿಸಿ ಕನ್ನಡಿಗರಿಗೆ ಚಿರಪರಿಚಿತರಾದವರು.

ಇತ್ತೀಚಿನ ಸುದ್ದಿ

ಜಾಹೀರಾತು