6:43 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಮೂಡುಬೆಳ್ಳೆಯಲ್ಲಿ ‘ಗ್ರಾಮ ಒನ್’ ನಾಗರಿಕ ಸೇವಾ ಕೇಂದ್ರ ಆರಂಭ

28/03/2022, 20:17

ಉಡುಪಿ(reporterkarnataka.com): ಸರಕಾರದ ವಿವಿಧ ಯೋಜನೆಗಳ ಸಮಗ್ರ ಮಾಹಿತಿ ಹಾಗೂ ಸೇವೆಯನ್ನೊದಗಿಸುವ ನಾಗರಿಕ ಸೇವಾ ಕೇಂದ್ರ `ಗ್ರಾಮ ಒನ್’ ಕೇಂದ್ರ ಮೂಡುಬೆಳ್ಳೆಯ ಫೆರ್ನಾಂಡಿಸ್ ಕಾಂಪ್ಲೆಕ್ಸ್‌ನಲ್ಲಿ ಸೋಮವಾರ ಶುಭಾರಂಭಗೊಂಡಿತು.

ಮೂಡುಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಾಕರ ಪೂಜಾರಿ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸಾರ್ವಜನಿಕರು  ಸರಕಾರದ ವಿವಿಧ ಸೇವೆಗಳನ್ನು ಪಡೆಯುವಲ್ಲಿ ಸಹಕಾರಿಯಾಗಿರುವ ಈ ಕೇಂದ್ರ ಯಶಸ್ಸು ಕಾಣಲಿ. ಜನತೆ ಇದರ ಪ್ರಯೋಜನ ಪಡೆದುಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.

ವೃದ್ಧಾಪ್ಯ ವೇತನ, ವಿಧವಾ, ಅಂಗವಿಕಲ ವೇತನ, ಹಿರಿಯ ನಾಗರಿಕರ ಗುರುತಿನ ಚೀಟಿ, ಸಂಧ್ಯಾ ಸುರಕ್ಷಾ ಯೋಜನೆ,  ಪಶು ಸಂಗೋಪನೆ ಇಲಾಖೆಯ ಯೋಜನೆಗಳು, ಕಂದಾಯ ಇಲಾಖೆಯ ಎಲ್ಲಾ ಸೇವೆಗಳು ಸೇರಿದಂತೆ ನೂರಕ್ಕೂ ಅಧಿಕ ನಾಗರಿಕ ಸೇವೆಗಳು ಈ ಕೇಂದ್ರದಲ್ಲಿ ಲಭ್ಯವಿರಲಿದೆ.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ಆರ್. ಜಿ., ಗ್ರಾಮ ಕರಣಿಕರಾದ ಪ್ರದೀಪ್ ಕುಮಾರ್, ಕಾರ್ಯದರ್ಶಿ ವಸಂತಿ ಬಾಯಿ, ಪಂಚಾಯತ್ ಸದಸ್ಯರಾದ ರಾಜೇಂದ್ರ ಶೆಟ್ಟಿ, ಬೆಳ್ಳೆ ಸಿ.ಎ ಬ್ಯಾಂಕ್ ಅಧ್ಯಕ್ಷ ಶಿವಾಜಿ ಎಸ್ ಸುವರ್ಣ, ಉಡುಪಿ ಜಿ.ಪಂ.ಮಾಜಿ ಸದಸ್ಯರಾದ ಐಡಾ ಗಿಬ್ಬ  ಡಿಸೋಜ, ತಾ.ಪಂ. ಮಾಜಿ ಸದಸ್ಯೆ ಸುಜಾತಾ ಎಸ್.ಸುವರ್ಣ, ಕಟ್ಟಡದ ಮಾಲಕರಾದ ಜೆರಾಲ್ಡ್ ಫೆರ್ನಾಂಡಿಸ್, ಪತ್ರಕರ್ತರಾದ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ, ಹರೀಶ್ ಶೆಟ್ಟಿ ಕಕ್ರಬೆಟ್ಟು, ನಿವೃತ್ತ ಶಿಕ್ಷಕಿ ರಾಧಾ ಟೀಚರ್, ಶಿಕ್ಷಕ ರಾಜೇಂದ್ರನಾಥ್, ಗಿಬ್ಬ ಡಿಸೋಜ ಉಪಸ್ಥಿತರಿದ್ದರು.

ಗ್ರಾಮ ಒನ್‌ನ ಪ್ರಾಂಚೈಸಿ ರಘುಶ್ಚಂದ್ರನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು