5:22 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಮೂಡುಬೆಳ್ಳೆಯಲ್ಲಿ ‘ಗ್ರಾಮ ಒನ್’ ನಾಗರಿಕ ಸೇವಾ ಕೇಂದ್ರ ಆರಂಭ

28/03/2022, 20:17

ಉಡುಪಿ(reporterkarnataka.com): ಸರಕಾರದ ವಿವಿಧ ಯೋಜನೆಗಳ ಸಮಗ್ರ ಮಾಹಿತಿ ಹಾಗೂ ಸೇವೆಯನ್ನೊದಗಿಸುವ ನಾಗರಿಕ ಸೇವಾ ಕೇಂದ್ರ `ಗ್ರಾಮ ಒನ್’ ಕೇಂದ್ರ ಮೂಡುಬೆಳ್ಳೆಯ ಫೆರ್ನಾಂಡಿಸ್ ಕಾಂಪ್ಲೆಕ್ಸ್‌ನಲ್ಲಿ ಸೋಮವಾರ ಶುಭಾರಂಭಗೊಂಡಿತು.

ಮೂಡುಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಾಕರ ಪೂಜಾರಿ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸಾರ್ವಜನಿಕರು  ಸರಕಾರದ ವಿವಿಧ ಸೇವೆಗಳನ್ನು ಪಡೆಯುವಲ್ಲಿ ಸಹಕಾರಿಯಾಗಿರುವ ಈ ಕೇಂದ್ರ ಯಶಸ್ಸು ಕಾಣಲಿ. ಜನತೆ ಇದರ ಪ್ರಯೋಜನ ಪಡೆದುಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.

ವೃದ್ಧಾಪ್ಯ ವೇತನ, ವಿಧವಾ, ಅಂಗವಿಕಲ ವೇತನ, ಹಿರಿಯ ನಾಗರಿಕರ ಗುರುತಿನ ಚೀಟಿ, ಸಂಧ್ಯಾ ಸುರಕ್ಷಾ ಯೋಜನೆ,  ಪಶು ಸಂಗೋಪನೆ ಇಲಾಖೆಯ ಯೋಜನೆಗಳು, ಕಂದಾಯ ಇಲಾಖೆಯ ಎಲ್ಲಾ ಸೇವೆಗಳು ಸೇರಿದಂತೆ ನೂರಕ್ಕೂ ಅಧಿಕ ನಾಗರಿಕ ಸೇವೆಗಳು ಈ ಕೇಂದ್ರದಲ್ಲಿ ಲಭ್ಯವಿರಲಿದೆ.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ಆರ್. ಜಿ., ಗ್ರಾಮ ಕರಣಿಕರಾದ ಪ್ರದೀಪ್ ಕುಮಾರ್, ಕಾರ್ಯದರ್ಶಿ ವಸಂತಿ ಬಾಯಿ, ಪಂಚಾಯತ್ ಸದಸ್ಯರಾದ ರಾಜೇಂದ್ರ ಶೆಟ್ಟಿ, ಬೆಳ್ಳೆ ಸಿ.ಎ ಬ್ಯಾಂಕ್ ಅಧ್ಯಕ್ಷ ಶಿವಾಜಿ ಎಸ್ ಸುವರ್ಣ, ಉಡುಪಿ ಜಿ.ಪಂ.ಮಾಜಿ ಸದಸ್ಯರಾದ ಐಡಾ ಗಿಬ್ಬ  ಡಿಸೋಜ, ತಾ.ಪಂ. ಮಾಜಿ ಸದಸ್ಯೆ ಸುಜಾತಾ ಎಸ್.ಸುವರ್ಣ, ಕಟ್ಟಡದ ಮಾಲಕರಾದ ಜೆರಾಲ್ಡ್ ಫೆರ್ನಾಂಡಿಸ್, ಪತ್ರಕರ್ತರಾದ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ, ಹರೀಶ್ ಶೆಟ್ಟಿ ಕಕ್ರಬೆಟ್ಟು, ನಿವೃತ್ತ ಶಿಕ್ಷಕಿ ರಾಧಾ ಟೀಚರ್, ಶಿಕ್ಷಕ ರಾಜೇಂದ್ರನಾಥ್, ಗಿಬ್ಬ ಡಿಸೋಜ ಉಪಸ್ಥಿತರಿದ್ದರು.

ಗ್ರಾಮ ಒನ್‌ನ ಪ್ರಾಂಚೈಸಿ ರಘುಶ್ಚಂದ್ರನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು