5:14 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮೂಡುಬಿದರೆ: ಜೆ.ಎ. ಅಕಾಡೆಮಿ ತರಬೇತಿ ಸಂಸ್ಥೆ ಫೆ.11ರಂದು ಉದ್ಘಾಟನೆ; ಸಂಗೀತ ಸ್ಪರ್ಧೆ, ಸಾಧಕರಿಗೆ ಸನ್ಮಾನ

06/02/2024, 17:23

ಮೂಡುಬಿದರೆ(reporterkarnataka.com): ಜೆ.ಎ. ಅಕಾಡೆಮಿ ತರಬೇತಿ ಸಂಸ್ಥೆಯ ಉದ್ಘಾಟನಾ ಸಮಾರಂಭ ಮೂಡುಬಿದರೆಯ ವೆಂಕಟರಮಣ ಹನುಮಂತ ದೇವಸ್ಥಾನ ಸಮೀಪದ ಲಕ್ಷ್ಮೀನರಸಿಂಹ ಕಟ್ಟಡದಲ್ಲಿ ಫೆಬ್ರವರಿ 11ರಂದು ಬೆಳಗ್ಗೆ 8.30ಕ್ಕೆ ನಡೆಯಲಿದೆ.
ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಉದ್ಘಾಟನೆ ನೆರವೇರಿಸುವರು. ಜೆ.ಎ. ಅಕಾಡೆಮಿ ಸಂಸ್ಥಾಪಕ ಡಾ. ಶಿವರಾಜ ಅರಸ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮೂಡುಬಿದರೆ ಎಂಸಿಎಸ್ ಬ್ಯಾಂಕ್ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಉದ್ಯಮಿ ಶ್ರೀಪತಿ ಭಟ್ ಭಾಗವಹಿಸುವರು.
*ಕಾರ್ಯಕ್ರಮದ ವಿಶೇಷ:* ವಿಶೇಷ ಕಾರ್ಯಕ್ರಮವಾಗಿ ದ.ಕ. ಹಾಗೂ ಉಡುಪಿ ಜಿಲ್ಲಾಮಟ್ಟದ ಸಂಗೀತ ಸ್ಪರ್ಧೆ ನಡೆಯಲಿದೆ. ಲಘು ಸಂಗೀತ, ಲಘು ಶಾಸ್ತ್ರೀಯ ಗಾಯನ ಜರುಗಲಿದೆ. ಸಂಗೀತ ವಿದ್ವಾನ್ ಡಾ. ಎನ್. ಸೋಮಶೇಖರ್ ಮಯ್ಯ ಶಿರ್ತಾಡಿ ಅವರು ಅಧ್ಯಕ್ಷತೆ ವಹಿಸುವರು.
*ಸಮಾರೋಪ:* ಸಮಾರೋಪ ಸಮಾರಂಭದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಗೌರವ ಉಪಸ್ಥಿತಿ ಇರುವರು. ಜೆ. ಎ. ಅಕಾಡೆಮಿ ಸಂಸ್ಥಾಪಕ ಡಾ. ಶಿವರಾಜ ಅರಸ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಅಭಯಚಂದ್ರ ಜೈನ್, ಲಕ್ಷ್ಮೀ ನರಸಿಂಹ ಬಿಲ್ಡಿಂಗ್ ಮಾಲೀಕ ಶ್ರೀನಾಥ್ ಭಟ್ ಹಾಗೂ ದ.ಕ. ಜಿಲ್ಲಾ ಮಹಿಳಾ ಕಾರ್ಮಿಕ ಘಟಕ ಹಾಗೂ ಜಾನಪದ ಪರಿಷತ್ ಅಧ್ಯಕ್ಷೆ ಪದ್ಮಶ್ರೀ ಭಟ್ ಪಾಲ್ಗೊಳ್ಳುವರು.
*ಸಾದಕರಿಗೆ ಸನ್ಮಾನ:* ಈ ಸಂದರ್ಭದಲ್ಲಿ ಏಕಲವ್ಯ ಪ್ರಶಸ್ತಿ ವಿಜೇತ ಮಹಮ್ಮದ್ ಇಲಿಯಾಸ್, ರಾಷ್ಟ್ರಮಟ್ಟದ ನೆಟ್ ಬಾಲ್ ಸ್ವಾಫ್ಟ್ ಬಾಲ್ ಆಟಗಾರ್ತಿ ರಕ್ಷಿತಾ ಶಿರ್ತಾಡಿ ಹಾಗೂ ರ್ಯಾಂಕ್ ವಿಜೇತೆ ಕೃತಿಕಾ ಭಟ್ ಅವರನ್ನು ಸನ್ಮಾನಿಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು