10:48 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಮೂಡುಪಲಿಮಾರು: ಅಪರಿಚಿನ ಮಾತು ನಂಬಿ ಲಕ್ಷಾಂತರ ರೂ. ಮೌಲ್ಯದ ಆಭರಣ ಕಳೆದುಕೊಂಡ ಮಹಿಳೆ

12/08/2022, 21:01

ಪಡುಬಿದ್ರೆ(reporterkarnataka.com);
ಕಾಪು ತಾಲೂಕಿನ ಮೂಡುಫಲಿಮಾರು ಎಂಬಲ್ಲಿ ಅಪರಿಚಿತ ವ್ಯಕ್ತಿಯ ಮಾತಿಗೆ ಮರುಳಾಗಿ ಮಹಿಳೆಯೊಬ್ಬರು ಲಕ್ಷಾಂತರ ರೂ. ಮೌಲ್ಯದ ಆಭರಣ ಕಳೆದುಕೊಂಡ ಘಟನೆ ನಡೆದಿದೆ.

ಮೂಡುಪಲಿಮಾರು ಎಂಬಲ್ಲಿ ಶೋಭಾ ಆಚಾರ್ಯ ಅವರು ತನ್ನ ತಾಯಿ, ಅಕ್ಕ ಮತ್ತು ತಮ್ಮನ ಜೊತೆ ವಾಸವಾಗಿದ್ದು, ಮೇ 6ರಂದು ಅಪರಿಚಿತ ವ್ಯಕ್ತಿಯೋರ್ವ ತನ್ನ ಹೆಸರು ಹರೀಶ್ ಪುತ್ತೂರು ವಿಶ್ವಕರ್ಮ ಕುಲದವರು ಎಂದು ಪರಿಚಯಿಸಿಕೊಂಡು ಬಂದಿದ್ದನು. ಅರ್ಧ ಗಂಟೆ ಮನೆಯಲ್ಲಿ ಇದ್ದು, ನಂತರ ಹೋಗಿದ್ದನು. ಆ ಬಳಿಕ ಎರಡು ದಿನ ಬಿಟ್ಟು ಅದೇ ವ್ಯಕ್ತಿಯು ಮಧ್ಯಾಹ್ನದ ವೇಳೆ ಮತ್ತೆ ಮನೆಗೆ ಬಂದಿದ್ದು, ತನಗೆ ಸೇರಿದ ಕುಂದಾಪುರದಲ್ಲಿದ್ದ 80 ಲಕ್ಷ ರೂ.‌ ಮೌಲ್ಯದ  ಜಾಗವು ಮಾರಾಟವಾಗಿದೆ. ಅದರ ದಾಖಲೆಗಳು ಬ್ಯಾಂಕಿನಲ್ಲಿರುವುದರಿಂದ ಅದನ್ನು ಬಿಡಿಸಿಕೊಳ್ಳಲು ತನಗೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾನೆ. ಈ ವೇಳೆ ಶೋಭಾ ಅವರು ಹಣ ಇಲ್ಲವೆಂದು ತಿಳಿಸಿದ್ದರು. ಆದರೆ ಶೋಭಾ ಹಾಗೂ ಅವರ ಅಕ್ಕ ಶ್ಯಾಮಲಾ ಅವರನ್ನು ನಂಬಿಸಿ 1.65 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪಡೆದುಕೊಂಡು ಹೋಗಿದ್ದನು‌. ಚಿನ್ನದ ಹಣದ ಜೊತೆಗೆ ಜಾಗ ಮಾರಾಟ ಮಾಡಿ ಬಂದಿರುವ ಹಣದಲ್ಲಿ ಹೆಚ್ಚುವರಿಯಾಗಿ ಹಣ ಕೊಡುತ್ತೇನೆ ಎಂದು ನಂಬಿಸಿ ಮೇ16 ರಂದು ಹೋಗಿದ್ದನು. ಬಳಿಕವೂ ಮನೆಗೆ ಬಂದು ಎರಡು ದಿನ ಮನೆಯಲ್ಲಿದ್ದು, ಆ ನಂತರ ಮನೆಯಿಂದ ಹೋದವನು ಈವರೆಗೂ ಬಂದಿಲ್ಲ. ಅಲ್ಲದೆ, ತೆಗೆದುಕೊಂಡು ಹೋದ ಚಿನ್ನಾಭರಣ ನೀಡಿದೆ ವಂಚಿಸಿದ್ದಾರೆ ಎಂದು ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು