10:33 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಮೂಡುಪಲಿಮಾರು: ಅಪರಿಚಿನ ಮಾತು ನಂಬಿ ಲಕ್ಷಾಂತರ ರೂ. ಮೌಲ್ಯದ ಆಭರಣ ಕಳೆದುಕೊಂಡ ಮಹಿಳೆ

12/08/2022, 21:01

ಪಡುಬಿದ್ರೆ(reporterkarnataka.com);
ಕಾಪು ತಾಲೂಕಿನ ಮೂಡುಫಲಿಮಾರು ಎಂಬಲ್ಲಿ ಅಪರಿಚಿತ ವ್ಯಕ್ತಿಯ ಮಾತಿಗೆ ಮರುಳಾಗಿ ಮಹಿಳೆಯೊಬ್ಬರು ಲಕ್ಷಾಂತರ ರೂ. ಮೌಲ್ಯದ ಆಭರಣ ಕಳೆದುಕೊಂಡ ಘಟನೆ ನಡೆದಿದೆ.

ಮೂಡುಪಲಿಮಾರು ಎಂಬಲ್ಲಿ ಶೋಭಾ ಆಚಾರ್ಯ ಅವರು ತನ್ನ ತಾಯಿ, ಅಕ್ಕ ಮತ್ತು ತಮ್ಮನ ಜೊತೆ ವಾಸವಾಗಿದ್ದು, ಮೇ 6ರಂದು ಅಪರಿಚಿತ ವ್ಯಕ್ತಿಯೋರ್ವ ತನ್ನ ಹೆಸರು ಹರೀಶ್ ಪುತ್ತೂರು ವಿಶ್ವಕರ್ಮ ಕುಲದವರು ಎಂದು ಪರಿಚಯಿಸಿಕೊಂಡು ಬಂದಿದ್ದನು. ಅರ್ಧ ಗಂಟೆ ಮನೆಯಲ್ಲಿ ಇದ್ದು, ನಂತರ ಹೋಗಿದ್ದನು. ಆ ಬಳಿಕ ಎರಡು ದಿನ ಬಿಟ್ಟು ಅದೇ ವ್ಯಕ್ತಿಯು ಮಧ್ಯಾಹ್ನದ ವೇಳೆ ಮತ್ತೆ ಮನೆಗೆ ಬಂದಿದ್ದು, ತನಗೆ ಸೇರಿದ ಕುಂದಾಪುರದಲ್ಲಿದ್ದ 80 ಲಕ್ಷ ರೂ.‌ ಮೌಲ್ಯದ  ಜಾಗವು ಮಾರಾಟವಾಗಿದೆ. ಅದರ ದಾಖಲೆಗಳು ಬ್ಯಾಂಕಿನಲ್ಲಿರುವುದರಿಂದ ಅದನ್ನು ಬಿಡಿಸಿಕೊಳ್ಳಲು ತನಗೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾನೆ. ಈ ವೇಳೆ ಶೋಭಾ ಅವರು ಹಣ ಇಲ್ಲವೆಂದು ತಿಳಿಸಿದ್ದರು. ಆದರೆ ಶೋಭಾ ಹಾಗೂ ಅವರ ಅಕ್ಕ ಶ್ಯಾಮಲಾ ಅವರನ್ನು ನಂಬಿಸಿ 1.65 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪಡೆದುಕೊಂಡು ಹೋಗಿದ್ದನು‌. ಚಿನ್ನದ ಹಣದ ಜೊತೆಗೆ ಜಾಗ ಮಾರಾಟ ಮಾಡಿ ಬಂದಿರುವ ಹಣದಲ್ಲಿ ಹೆಚ್ಚುವರಿಯಾಗಿ ಹಣ ಕೊಡುತ್ತೇನೆ ಎಂದು ನಂಬಿಸಿ ಮೇ16 ರಂದು ಹೋಗಿದ್ದನು. ಬಳಿಕವೂ ಮನೆಗೆ ಬಂದು ಎರಡು ದಿನ ಮನೆಯಲ್ಲಿದ್ದು, ಆ ನಂತರ ಮನೆಯಿಂದ ಹೋದವನು ಈವರೆಗೂ ಬಂದಿಲ್ಲ. ಅಲ್ಲದೆ, ತೆಗೆದುಕೊಂಡು ಹೋದ ಚಿನ್ನಾಭರಣ ನೀಡಿದೆ ವಂಚಿಸಿದ್ದಾರೆ ಎಂದು ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು