1:54 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮೂಡುಬಿದಿರೆಯಲ್ಲೊಂದು ಹೃದಯ ವಿದ್ರಾವಕ ಘಟನೆ : ಸಂಶಯಪಟ್ಟು ಪತ್ನಿಯನ್ನೇ ಹೊಡೆದು ಕೊಂದ ಪತಿರಾಯ

18/08/2021, 14:34

ಮೂಡಬಿದ್ರಿ (Reporterkarnataka.com)

ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯ ಮಠ ಎಂಬಲ್ಲಿ ಪತ್ನಿಯ ಮೇಲೆ ಸಂಶಯಪಟ್ಟು ಕೊಲೆ ಮಾಡಿದ ಪ್ರಕರಣ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಮಂಗಳವಾರ ಸಂಜೆ ಪತಿ ಪತ್ನಿಯರ ನಡುವೆ ಜಗಳ ನಡೆದಿದ್ದು, ದಿನರಾಜ್ ಹೆಂಡತಿಯ ತಲೆಗೆ ಬಲಾಯಿ ಎನ್ನುವ ಸಲಾಕೆ ಹಿಡಿಯಲ್ಲಿ ಹೊಡೆದಿದ್ದಾನೆ. ತಲೆ, ಮುಖ, ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದು ರಕ್ತ ಸೋರತೊಡಗಿತ್ತು. ಸುನೀತಾ ನೆಲಕ್ಕೆ ಉರುಳಿದ ಬಳಿಕ ಆಕೆಯ ತಾಯಿ ಬೊಬ್ಬೆ ಹೊಡೆದಿದ್ದರಿಂದ ಪತ್ನಿಯನ್ನು ದಿನರಾಜನೇ ಬೆಳುವಾಯಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲು ತಂದಿದ್ದಾನೆ.

ಆದರೆ, ಆಸ್ಪತ್ರೆಯಲ್ಲಿ ಪತ್ನಿ ಮಹಡಿ ಮೇಲಿಂದ ಬಿದ್ದು ಗಾಯವಾಗಿದ್ದೆಂದು ಸುಳ್ಳು ಹೇಳಿದ್ದಾನೆ. ಆದರೆ, ವೈದ್ಯರು ನೋಡಿ, ಈಕೆಯ ಸ್ಥಿತಿ ಗಂಭೀರ ಆಗಿರುವುದರಿಂದ ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದಾರೆ. ಹಾಗೂ ಸಂಶಯಗೊಂಡು ಮೂಡುಬಿದ್ರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭಾರೀ ರಕ್ತಸ್ರಾವದ ಜೊತೆಗೆ ಮುಖ, ಕುತ್ತಿಗೆಯ ಭಾಗಕ್ಕೆ ಕಡಿದ ರೀತಿಯ ಗಾಯ ಆಗಿದ್ದರಿಂದ ವೈದ್ಯರು ಸಂಶಯಪಟ್ಟು ಪೊಲೀಸರಿಗೆ ಮಾಹಿತಿ ನೀಡಿದ್ದರು.

ನಿನ್ನೆ ರಾತ್ರಿ ಮಂಗಳೂರಿನ ಎಜೆ ಆಸ್ಪತ್ರೆಗೆ ತರುವಷ್ಟರಲ್ಲಿ ಭಾರೀ ರಕ್ತಸ್ರಾವದಿಂದಾಗಿ ಅಲ್ಲಿಗೆ ತಲುಪುವ ಮೊದಲೇ ಮೃತಪಟ್ಟಿದ್ದಾಳೆ. ಇಂದು ಬೆಳಗ್ಗೆ ಮೂಡಬಿದಿರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ವೇಳೆ ತಾನೇ ಹೊಡೆದಿದ್ದನ್ನು ಒಪ್ಪಿಕೊಂಡಿದ್ದಾನೆ.

ಬಡ ಕುಟುಂಬದ ಸುನೀತಾ ತನ್ನ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ಜೀವನ ನಡೆಸುತ್ತಿದ್ದರು. ಒಂದೂವರೆ ವರ್ಷಗಳ ಹಿಂದೆ ಸಂಬಂಧಿಕರು ಸೇರಿ ಮದುವೆ ಮಾಡಿಸಿದ್ದರು. ತಾಯಿ ಒಬ್ಬಳೆ ಮನೆಯಲ್ಲಿ ಇದ್ದುದರಿಂದ ಸುನೀತಾ ಅಲ್ಲಿಯೇ ಉಳಿದುಕೊಂಡಿದ್ದು, ದಿನ್‌ರಾಜ್ ಕೂಡಾ ಅಲ್ಲಿಯೇ ಇದ್ದು ಮೂಡುಬಿದಿರೆಯಲ್ಲಿ ಬ್ಯಾಟರಿ ಅಂಗಡಿಗೆ ಕೆಲಸಕ್ಕೆ ಬರುತ್ತಿದ್ದಾನೆನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು