5:19 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮೂಡುಬಿದಿರೆಯಲ್ಲೊಂದು ಹೃದಯ ವಿದ್ರಾವಕ ಘಟನೆ : ಸಂಶಯಪಟ್ಟು ಪತ್ನಿಯನ್ನೇ ಹೊಡೆದು ಕೊಂದ ಪತಿರಾಯ

18/08/2021, 14:34

ಮೂಡಬಿದ್ರಿ (Reporterkarnataka.com)

ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯ ಮಠ ಎಂಬಲ್ಲಿ ಪತ್ನಿಯ ಮೇಲೆ ಸಂಶಯಪಟ್ಟು ಕೊಲೆ ಮಾಡಿದ ಪ್ರಕರಣ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಮಂಗಳವಾರ ಸಂಜೆ ಪತಿ ಪತ್ನಿಯರ ನಡುವೆ ಜಗಳ ನಡೆದಿದ್ದು, ದಿನರಾಜ್ ಹೆಂಡತಿಯ ತಲೆಗೆ ಬಲಾಯಿ ಎನ್ನುವ ಸಲಾಕೆ ಹಿಡಿಯಲ್ಲಿ ಹೊಡೆದಿದ್ದಾನೆ. ತಲೆ, ಮುಖ, ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದು ರಕ್ತ ಸೋರತೊಡಗಿತ್ತು. ಸುನೀತಾ ನೆಲಕ್ಕೆ ಉರುಳಿದ ಬಳಿಕ ಆಕೆಯ ತಾಯಿ ಬೊಬ್ಬೆ ಹೊಡೆದಿದ್ದರಿಂದ ಪತ್ನಿಯನ್ನು ದಿನರಾಜನೇ ಬೆಳುವಾಯಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲು ತಂದಿದ್ದಾನೆ.

ಆದರೆ, ಆಸ್ಪತ್ರೆಯಲ್ಲಿ ಪತ್ನಿ ಮಹಡಿ ಮೇಲಿಂದ ಬಿದ್ದು ಗಾಯವಾಗಿದ್ದೆಂದು ಸುಳ್ಳು ಹೇಳಿದ್ದಾನೆ. ಆದರೆ, ವೈದ್ಯರು ನೋಡಿ, ಈಕೆಯ ಸ್ಥಿತಿ ಗಂಭೀರ ಆಗಿರುವುದರಿಂದ ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದಾರೆ. ಹಾಗೂ ಸಂಶಯಗೊಂಡು ಮೂಡುಬಿದ್ರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭಾರೀ ರಕ್ತಸ್ರಾವದ ಜೊತೆಗೆ ಮುಖ, ಕುತ್ತಿಗೆಯ ಭಾಗಕ್ಕೆ ಕಡಿದ ರೀತಿಯ ಗಾಯ ಆಗಿದ್ದರಿಂದ ವೈದ್ಯರು ಸಂಶಯಪಟ್ಟು ಪೊಲೀಸರಿಗೆ ಮಾಹಿತಿ ನೀಡಿದ್ದರು.

ನಿನ್ನೆ ರಾತ್ರಿ ಮಂಗಳೂರಿನ ಎಜೆ ಆಸ್ಪತ್ರೆಗೆ ತರುವಷ್ಟರಲ್ಲಿ ಭಾರೀ ರಕ್ತಸ್ರಾವದಿಂದಾಗಿ ಅಲ್ಲಿಗೆ ತಲುಪುವ ಮೊದಲೇ ಮೃತಪಟ್ಟಿದ್ದಾಳೆ. ಇಂದು ಬೆಳಗ್ಗೆ ಮೂಡಬಿದಿರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ವೇಳೆ ತಾನೇ ಹೊಡೆದಿದ್ದನ್ನು ಒಪ್ಪಿಕೊಂಡಿದ್ದಾನೆ.

ಬಡ ಕುಟುಂಬದ ಸುನೀತಾ ತನ್ನ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ಜೀವನ ನಡೆಸುತ್ತಿದ್ದರು. ಒಂದೂವರೆ ವರ್ಷಗಳ ಹಿಂದೆ ಸಂಬಂಧಿಕರು ಸೇರಿ ಮದುವೆ ಮಾಡಿಸಿದ್ದರು. ತಾಯಿ ಒಬ್ಬಳೆ ಮನೆಯಲ್ಲಿ ಇದ್ದುದರಿಂದ ಸುನೀತಾ ಅಲ್ಲಿಯೇ ಉಳಿದುಕೊಂಡಿದ್ದು, ದಿನ್‌ರಾಜ್ ಕೂಡಾ ಅಲ್ಲಿಯೇ ಇದ್ದು ಮೂಡುಬಿದಿರೆಯಲ್ಲಿ ಬ್ಯಾಟರಿ ಅಂಗಡಿಗೆ ಕೆಲಸಕ್ಕೆ ಬರುತ್ತಿದ್ದಾನೆನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು